ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈತಪ್ಪುವ ಬಗ್ಗೆ ಸವದಿ ಏನಂದ್ರು?
ಬೆಳಗಾವಿ, ಫೆಬ್ರವರಿ 2: ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈತಪ್ಪುವ ವಿಚಾರವೆಲ್ಲವೂ ಕೇವಲ ಊಹಾಪೋಹವಷ್ಟೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮುಖ್ಯಮಂತ್ರಿಗೆ ಇರುವ ಪರಮಾಧಿಕಾರವನ್ನು ಯಾರೂ ಕೂಡ ಪ್ರಶ್ನೆಮಾಡುವಹಾಗಿಲ್ಲ. ಯಾರನ್ನು ಮುಂದುವರೆಸಬೇಕು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರೇ ತೀರ್ಮಾನ ಮಾಡುತ್ತಾರೆ ಆದರೆ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೈತಪ್ಪುವುದು ಕೇವಲ ಊಹಾಪೋಹಗಳಷ್ಟೇ ಎಂದು ಹೇಳಿದರು.

ಫೆಬ್ರವರಿ 3ರಂದು ಸಚಿವ ಸ್ಥಾನದ ಕುರಿತು ಸ್ಪಷ್ಟನೆ ದೊರೆಯಲಿದೆ
ಮೂರ್ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಮಾಡುವುದಾಗಿ ಈಗಾಗಲೇ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಫೆ.3 ಅಥವಾ ಫೆ.4 ರಂದು ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಆಗಲೇ ಈ ಬಗ್ಗೆ ಸ್ಪಷ್ಟನೆ ಸಿಗುವುದಕ್ಕೆ ಸಾಧ್ಯ. ಸಿಎಂ ಪಕ್ಷದ ರಾಷ್ಟರೀಯ ವರಿಷ್ಠರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ಗೆ ನಾಮಪತ್ರ ಸಲ್ಲಿಕೆ
ಇದೇ ವೇಳೆ ವಿಧಾನಪರಿಷತ್ಗೆ ನಾಮಪತ್ರ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಪಕ್ಷದ ಸೂಚನೆ ಬಂದ ಬಳಿಕ ವಿಧಾನಪರಿಷತ್ಗೆ ನಾಮಪತ್ರ ಸಲ್ಲಿಸುತ್ತೇನೆ. ಯಾರೂ ಕೂಡ ನನ್ನನ್ನು ಸಂಪರ್ಕಿಸಿಲ್ಲ. ಭಾನುವಾರ ಧಾರವಾಡ ಪ್ರವಾಸದಲ್ಲಿದ್ದೇನೆ ಎಂದರು.

ಪಕ್ಷದ ಅಧ್ಯಕ್ಷರು ಏನು ಹೇಳುತ್ತಾರೆ ಕಾದು ನೋಡಬೇಕು
ಫೆ.3ರಂದು ಬೆಂಗಳೂರಿಗೆ ಹೋಗುತ್ತಿದ್ದೇನೆ, ಅಲ್ಲಿ ಹೋದ ಮೇಲೆ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಲಿದ್ದೇನೆ. ಅವರೇನು ಸೂಚನೆ ಕೊಡುತ್ತಾರೋ ಅದರ ಮೇಲೆ ನಿರ್ಣಯ ಕೈಗೊಳ್ಳುವೆ ಎಂದು ಮಾಹಿತಿ ನೀಡಿದರು.

ನಮ್ಮ ಹೋರಾಟವನ್ನು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು
ನಮ್ಮದು ಹೋರಾಟವೇ ಹೊರತು ಮಾರಾಟವಲ್ಲ ಅದನ್ನು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು ಎಂದು ಎಚ್ಎಸ್ ವಿಶ್ವನಾಥ್ ಹೇಳಿದ್ದಾರೆ. ಆಪರೇಷನ್ ಕಮಲದ ಬಗ್ಗೆ ಶೀಘ್ರವೇ ಪುಸ್ತಕವೊಂದನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications