ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈತಪ್ಪುವ ಬಗ್ಗೆ ಸವದಿ ಏನಂದ್ರು?
ಬೆಳಗಾವಿ, ಫೆಬ್ರವರಿ 2: ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈತಪ್ಪುವ ವಿಚಾರವೆಲ್ಲವೂ ಕೇವಲ ಊಹಾಪೋಹವಷ್ಟೇ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮುಖ್ಯಮಂತ್ರಿಗೆ ಇರುವ ಪರಮಾಧಿಕಾರವನ್ನು ಯಾರೂ ಕೂಡ ಪ್ರಶ್ನೆಮಾಡುವಹಾಗಿಲ್ಲ. ಯಾರನ್ನು ಮುಂದುವರೆಸಬೇಕು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರೇ ತೀರ್ಮಾನ ಮಾಡುತ್ತಾರೆ ಆದರೆ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೈತಪ್ಪುವುದು ಕೇವಲ ಊಹಾಪೋಹಗಳಷ್ಟೇ ಎಂದು ಹೇಳಿದರು.

ಫೆಬ್ರವರಿ 3ರಂದು ಸಚಿವ ಸ್ಥಾನದ ಕುರಿತು ಸ್ಪಷ್ಟನೆ ದೊರೆಯಲಿದೆ
ಮೂರ್ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಮಾಡುವುದಾಗಿ ಈಗಾಗಲೇ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಫೆ.3 ಅಥವಾ ಫೆ.4 ರಂದು ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಆಗಲೇ ಈ ಬಗ್ಗೆ ಸ್ಪಷ್ಟನೆ ಸಿಗುವುದಕ್ಕೆ ಸಾಧ್ಯ. ಸಿಎಂ ಪಕ್ಷದ ರಾಷ್ಟರೀಯ ವರಿಷ್ಠರ ಜೊತೆ ಚರ್ಚೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ಗೆ ನಾಮಪತ್ರ ಸಲ್ಲಿಕೆ
ಇದೇ ವೇಳೆ ವಿಧಾನಪರಿಷತ್ಗೆ ನಾಮಪತ್ರ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಪಕ್ಷದ ಸೂಚನೆ ಬಂದ ಬಳಿಕ ವಿಧಾನಪರಿಷತ್ಗೆ ನಾಮಪತ್ರ ಸಲ್ಲಿಸುತ್ತೇನೆ. ಯಾರೂ ಕೂಡ ನನ್ನನ್ನು ಸಂಪರ್ಕಿಸಿಲ್ಲ. ಭಾನುವಾರ ಧಾರವಾಡ ಪ್ರವಾಸದಲ್ಲಿದ್ದೇನೆ ಎಂದರು.

ಪಕ್ಷದ ಅಧ್ಯಕ್ಷರು ಏನು ಹೇಳುತ್ತಾರೆ ಕಾದು ನೋಡಬೇಕು
ಫೆ.3ರಂದು ಬೆಂಗಳೂರಿಗೆ ಹೋಗುತ್ತಿದ್ದೇನೆ, ಅಲ್ಲಿ ಹೋದ ಮೇಲೆ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಲಿದ್ದೇನೆ. ಅವರೇನು ಸೂಚನೆ ಕೊಡುತ್ತಾರೋ ಅದರ ಮೇಲೆ ನಿರ್ಣಯ ಕೈಗೊಳ್ಳುವೆ ಎಂದು ಮಾಹಿತಿ ನೀಡಿದರು.

ನಮ್ಮ ಹೋರಾಟವನ್ನು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು
ನಮ್ಮದು ಹೋರಾಟವೇ ಹೊರತು ಮಾರಾಟವಲ್ಲ ಅದನ್ನು ಯಡಿಯೂರಪ್ಪ ಅರ್ಥಮಾಡಿಕೊಳ್ಳಬೇಕು ಎಂದು ಎಚ್ಎಸ್ ವಿಶ್ವನಾಥ್ ಹೇಳಿದ್ದಾರೆ. ಆಪರೇಷನ್ ಕಮಲದ ಬಗ್ಗೆ ಶೀಘ್ರವೇ ಪುಸ್ತಕವೊಂದನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications