ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿಗಳೇ ಆಂಬ್ಯುಲೆನ್ಸ್‌ ಎಲ್ಲಿ?; ಡಿಕೆಶಿ ಪ್ರಶ್ನೆ

|
Google Oneindia Kannada News

ಬೆಳಗಾವಿ, ಆಗಸ್ಟ್ 17 : ಸ್ಥಳೀಯರ ಅಸಹಕಾರದಿಂದಾಗಿ ಬೆಳಗಾವಿಯಲ್ಲಿ ವೃದ್ಧನ ಶವವನ್ನು ಸೈಕಲ್‌ನಲ್ಲಿ ಸಾಗಣೆ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಪ್ರತಿಪಕ್ಷ ನಾಯಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೋಮವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಟ್ಯಾಗ್ ಮಾಡಿದ್ದು, "ಸಿಎಂ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?" ಎಂದು ಹೇಳಿದ್ದಾರೆ.

ಬೆಳಗಾವಿ; ಸ್ಥಳೀಯರ ಅಸಹಕಾರ, ಸೈಕಲ್‌ನಲ್ಲಿ ಶವ ಸಾಗಣೆಬೆಳಗಾವಿ; ಸ್ಥಳೀಯರ ಅಸಹಕಾರ, ಸೈಕಲ್‌ನಲ್ಲಿ ಶವ ಸಾಗಣೆ

ಸೈಕಲ್‌ನಲ್ಲಿ ಶವ ಸಾಗಣೆ ಮಾಡುವ ವಿಡಿಯೋವನ್ನು ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. "ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ" ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ! ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ!

Dead Body Transported In Bicycle Where Is Ambulance Asks DKS

"ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಕೆಪಿಸಿಸಿ ಅಧ್ಯಕ್ಷರು ಆರೋಪಿಸಿದ್ದಾರೆ.

ಕೋವಿಡ್ ಭೀತಿ; ಬೆಂಗಳೂರಲ್ಲಿ ಲಭ್ಯವಿರುವ ಅಂಬ್ಯುಲೆನ್ಸ್‌ಗಳ ಲೆಕ್ಕ ಕೋವಿಡ್ ಭೀತಿ; ಬೆಂಗಳೂರಲ್ಲಿ ಲಭ್ಯವಿರುವ ಅಂಬ್ಯುಲೆನ್ಸ್‌ಗಳ ಲೆಕ್ಕ

ಬೆಳಗಾವಿಯ ಕಿತ್ತೂರು ತಾಲೂಕಿನ ಎಂ. ಕೆ. ಹುಬ್ಬಳ್ಳಿಯ ವೃದ್ಧ ಜ್ವರದಿಂದಾಗಿ ಮೃತಪಟ್ಟಿದ್ದ. ಕೋವಿಡ್‌ನಿಂದ ಮೃತಪಟ್ಟಿರಬಹುದು ಎಂದು ಸ್ಥಳೀಯರು ಅಂತ್ಯಕ್ರಿಯೆಗೆ ಸಹಕಾರ ನೀಡಲಿಲ್ಲ. ಆಂಬ್ಯುಲೆನ್ಸ್ ಸಹ ಸಿಗದ ಕಾರಣ ಕುಟುಂಬದವರು ಸೈಕಲ್‌ನಲ್ಲಿ ಶವವನ್ನು ಸಾಗಣೆ ಮಾಡಿದ್ದರು.

English summary
71 year old man dead body transported in bicycle in Belagavi. KPCC president D. K. Shivakumar asked Karnataka chief minister B. S. Yediyurappa where is ambulance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X