ಕೆಪಿಎಂಇ ಕಾಯ್ದೆ ವಿಧಾನಪರಿಷತ್ ನಲ್ಲಿ ಅಂಗೀಕಾರ
ಬೆಳಗಾವಿ, ನವೆಂಬರ್ 23 : ನಿನ್ನೆ (ನವೆಂಬರ್ 22)ರಂದು ವಿಧಾನಸಭೆಯಲ್ಲಿ ಅನುಮೋದನೆಯಾಗಿದ್ದ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆ ಇಂದು ವಿಧಾನಪರಿಷತ್ತಿನಲ್ಲಿ ಅಂಗೀಕಾರವಾಯಿತು.
ಅಂಗೀಕಾರಕ್ಕೆ ಮುಂಚೆ ವಿಧಾನಪರಿಷತ್ ನಲ್ಲಿ ಕಾಯ್ದೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಇದು ಯಾರ ವಿರುದ್ಧವೋ ತಂದ ಕಾಯ್ದೆಯಲ್ಲ, ಜನಗಳಿಗಾಗಿ ತಂದ ಕಾಯ್ದೆ. ಜನರಿಗೆ ಇಂತಹಾ ಕಾಯ್ದೆಯೊಂದರ ಅವಶ್ಯಕತೆ ಇತ್ತು ಎಂದು ತಾವು ತಂದ ಕಾಯ್ದೆಯನ್ನು ಸಮರ್ಥಿಸಿಕೊಂಡರು.

ನಂತರ ಮಾತನಾಡಿದ ಬಿಜೆಪಿ ಸದಸ್ಯ ರಾಮಚಂದ್ರೇಗೌಡ ತಾವು ಕಾಯ್ದೆಯನ್ನು ಸ್ವಾಗತಿಸುವುದಾಗಿ ಹೇಳಿದರಾದರೂ ಕಾಯ್ದೆ ಇನ್ನಷ್ಟು ಗಟ್ಟಿಯಾಗಿರಬೇಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
"ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದ ವೇಳೆ ವೈದ್ಯರ ರಕ್ಷಣೆಗೆ ಅಂತ ಒಂದು ಕಾನೂನು ತಂದಿದ್ದೆ. ಆದರೆ ಈಗ ವಿಧೇಯಕ್ಕೆ ತಿದ್ದುಪಡಿ ಮಾಡಿದ ಮೇಲೆ ವಿಧೇಯಕ ಹಲ್ಲಿಲ್ಲದ ಹಾವಾಗಿದೆ, ಬುಸ್ ಅನ್ನುತ್ತೆ ಆದರೆ ಕಚ್ಚಲ್ಲ' ಎಂದು ಅವರು ಹೇಳಿದರು.
ವೈದ್ಯರ ಪರವಾಗಿ ಮಾತನಾಡಿದ ರಾಮಚಂದ್ರೇಗೌಡ ಅವರು "ನಮ್ಮಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಆಡುವ ವೈದ್ಯರಿಲ್ಲ ಎಂದು ನಂಬಿದ್ದೇನೆ, ಆದರೆ ವೈದ್ಯಕೀಯ ಸಂಸ್ಥೆಗಳು ಕೋಟ್ಯಾಂತರ ಹಣ ವಸೂಲಿ ಮಾಡುತ್ತಿವೆ' ಎಂದರು.
ತಮ್ಮೊಡನೇ ಆಗಿದ್ದ ವೈಯಕ್ತಿಕ ಅನುಭವವನ್ನು ಸದನದ ಮುಂದಿಟ್ಟ ರಾಮಚಂದ್ರೇಗೌಡ ಅವರು "ಒಮ್ಮೆ ಕಾರ್ ಡ್ರೈವರ್ ಗೆ ಅಪಘಾತ ಆಗಿತ್ತು, ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಧಾಖಲಿಸಿದೆ, ಆಸ್ಪತ್ರೆಯವರು ಡ್ರೈವರ್ ಹೆಲ್ತ್ ಇನ್ಸುರೆನ್ಸ್ ಇದೆಯಾ ಅಂತ ಕೇಳಿದ್ರು, ಇಲ್ಲ ಅಂದಿದ್ದಕ್ಕೆ ಗಾಯಕ್ಕೆ ಔಷದಿ ಹಚ್ಚಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು' ಎಂದು ಖಾಸಗಿ ಆಸ್ಪತ್ರೆಗಳ ಧನದಾಹಿತನವನ್ನು ಜಾಹೀರು ಮಾಡಿದರು.
ನಂತರ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ ಅವರು 'ವೈದ್ಯರ ಮೇಲೆ ವಿಧೇಯಕ ತರುವುದಕ್ಕಿಂತಲೂ ವೈದ್ಯಕೀಯ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧೇಯಕಕ್ಕೆ ತಿದ್ದುಪಡಿ ಮಾಡಿ' ಎಂದು ಸಲಹೆ ನೀಡಿದರು.
ಮುಂದೆ ಮಾತನಾಡಿ, ಮನುಷ್ಯನ ಪ್ರಾಣ ಉಳಿಸಬೇಕಾದವರು ಧನದಾಹಿಗಳಾಗಿದ್ದಾರೆ. ಎಲ್ಲಾ ವೈದ್ಯರನ್ನೂ ಒಂದೇ ಲೆಕ್ಕದಲ್ಲಿ ಅಳೆಯಲು ಆಗಲ್ಲ. ವೈದ್ಯೋ ನಾರಾಯಣೋ ಹರಿ ಎಂಬ ಅನೇಕ ಒಳ್ಳೆ ವೈದ್ಯರಿದ್ದಾರೆ, ಜನ ಖಾಸಗಿ ಆಸ್ಪತ್ರೆಗೆ ಯಾಕೆ ಹೋಗ್ತಾರೆ ಅನ್ನೊದರ ಬಗ್ಗೆ ಒಂದು ಅದ್ಯಯನ ಮಾಡಬೇಕಿದೆ. ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳ ವರ್ತನೆಯಂತೂ ಭಯ ಹುಟ್ಟಿಸುತ್ತೆ. ಸರ್ಕಾರಿ ಆಸ್ಪತ್ರೆ ವೈದ್ಯರೇ ಒಂದೊಂದು ಖಾಸಗಿ ಆಸ್ಪತ್ರೆ ಇಟ್ಟಕೊಂಡಿದ್ದಾರೆ ಎಂದು ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications