ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಶಿವಸೇನಾ ಮುಖಂಡ

|
Google Oneindia Kannada News

ಬೆಳಗಾವಿ, ಮಾರ್ಚ್ 30: "ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ" ಎನ್ನುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ ಶಿವಸೇನಾ ಮುಖಂಡ ಸಂಜಯ್ ರೌತ್!

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ ಕುರಿತ ಕರ್ನಾಟಕ-ಮಾಹಾರಾಷ್ಟ್ರ ನಡುವಿನ ವಿವಾದದ ಕುರಿತು ಮಾತನಾಡಿದ ಅವರು, 'ಬೆಳಗಾವಿಯ ಜನರು ಕರ್ನಾಟಕ ಸರ್ಕಾರದ ಅನ್ಯಾಯದಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.

ಚುನಾವಣೆ ವೇಳೆ ಬೆಳಗಾವಿಯಲ್ಲಿ ಬೆಂಕಿ ಹಚ್ಚಲು ಬರ್ತಾರೆ ಶರದ್ ಪವಾರ್ ಚುನಾವಣೆ ವೇಳೆ ಬೆಳಗಾವಿಯಲ್ಲಿ ಬೆಂಕಿ ಹಚ್ಚಲು ಬರ್ತಾರೆ ಶರದ್ ಪವಾರ್

ಬೆಳಗಾವಿಯ ಜನರಿಗೆ ಅಥವಾ ಅಲ್ಲಿನ ಗಡಿ ಪ್ರದೇಶಕ್ಕೆ ಯಾವುದೇ ರೀತಿಯ ಅನ್ಯಾಯವಾದರೂ ಅದು ಇಡೀ ಮಹಾರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಕಾಶ್ಮೀರ, ಕಾವೇರಿ, ಸಟ್ಲೇಜ್ ಅಥವಾ ಬೆಳಗಾವಿ ವಿವಾದಗಳು ಪ್ರಜಾಪ್ರಭುತ್ವದಿಂದ ಪರಿಹಾರವಾಗಿಲ್ಲ ಎಂದರೆ ನಾವು ಹಿಂಸೆಯ ಹಾದಿ ಹಿಡಿಯುತ್ತೇವೆ ಎಂದು ಅವರು ಹೇಳಿದ್ದಾರೆ.

Declare Belagavi a union territory, says angry Shiv Sena

ಬೆಳಗಾವಿ ಮತ್ತು ಇತರೆ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡುವುದರಿಂದ ಬೆಳಗಾವಿ ವಿವಾದವನ್ನು ಇತ್ಯರ್ಥಗೊಳಿಸಬಹುದು ಎಂದು ಸಹ ಅವರು ಹೇಳಿದ್ದಾರೆ. ಭಾಷೆಯ ಆಧಾರದ ಮೇಲೆ ಬೆಳಗಾವಿಯನ್ನು ಮಹಾರಾಷ್ಟ್ರದ ಭಾಗ ಎಂದು ಪರಿಗಣಿಸುವಂತೆ ಮಹಾರಾಷ್ಟ್ರದ ಜನ ಎಂದಿದನಿಂದಲೂ ಹೋರಾಟ ನಡೆಸುತ್ತಿದ್ದಾರೆ.

English summary
Shiv Sena leader Sanjay Raut on Thursday threatened to use violence if the Belgaum border dispute was not solved soon. He claimed that the people of Belgaum were suffering 'injustice' at the hands of the Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X