ಎಚ್.ವಿಶ್ವನಾಥ್ಗೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ತಿರುಗೇಟು
ಬೆಳಗಾವಿ, ಡಿಸೆಂಬರ್ 1: ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಸಚಿವರಾಗಲು ಅನರ್ಹರು ಎಂದು ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ವಿಶ್ವನಾಥ್ ಗರಂ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಬೆಳಗಾವಿಯಲ್ಲಿ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ತಿರುಗೇಟು ನೀಡಿದ್ದಾರೆ.
ನಾವು, ನೀವೆಲ್ಲಾ ನಡೆಯುತ್ತಿರುವುದು ಕಾನೂನಿನ ತಳಹದಿ ಮೇಲೆ. ಸಂವಿಧಾನದ ಆಶಯದಂತೆ ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ಸಚಿವ ಸ್ಥಾನದ ವಿಷಯ ನ್ಯಾಯಾಲಯದಲ್ಲಿದ್ದಾಗ, ನಾವು ಹೊರಗೆ ಮಾತನಾಡಿದರೆ ಅದು ಕಾನೂನಿಗೆ ವಿರುದ್ಧವಾಗಿದೆ, ದ್ಯಾಟ್ ಇಸ್ ನಾಟ್ ಗುಡ್ ಎಂದು ಹೇಳಿದ್ದಾರೆ.

ಅವರನ್ನು ಸಚಿವರ ಪಟ್ಟಿಯಿಂದ ತೆಗೆಸಿದ ಬಗ್ಗೆ ನನಗೆ ಮಾಹಿತಿ ಇಲ್ಲ, ಅದನ್ನು ನಮ್ಮ ಸಿಎಂ, ರಾಜ್ಯದ ನಾಯಕರು ಚರ್ಚೆ ಮಾಡುತ್ತಾರೆ. ಯಾವುದೇ ಒಂದು ವಿಷಯ ಕಾನೂನಿನ ಚೌಕಟ್ಟಿನಲ್ಲಿದ್ದಾಗ, ಅದರ ಬಗ್ಗೆ ಚರ್ಚೆ ಮಾಡಲು ಅವಕಾಶ ಇರುವುದಿಲ್ಲ. ನಮ್ಮದೇ ಆದ ಕಾನೂನು ಸಚಿವರು, ಕಾನೂನು ಇಲಾಖೆ ಇರುತ್ತದೆ. ಅದಕ್ಕೆ ಸಮರ್ಥವಾದಂತಹ ಅಡ್ವೋಕೇಟ್ ಜನರಲ್ ಇರುತ್ತಾರೆ. ಅವರ ಜೊತೆ ಚರ್ಚೆ ಮಾಡಿ ಸಿಎಂ ಹಾಗೂ ವರಿಷ್ಠರು ಕಾನೂನಾತ್ಮಕವಾಗಿ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಸಂವಿಧಾನದ ವಿಧಿ 164 (1)(ಬಿ) ಹಾಗೂ 361(ಬಿ) ನಿಯಮಗಳಡಿ ಎಚ್.ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗದೇ ಇರುವುದರಿಂದ ಅನರ್ಹತೆ ಮುಂದುವರೆದಿದೆ ಎಂದು ಹೈಕೋರ್ಟ್ ಹೇಳಿದೆ.
ಇನ್ನುಳಿದಂತೆ ಆರ್.ಶಂಕರ್ ಮತ್ತು ಎಂಟಿಬಿ ನಾಗರಾಜ್ ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರಿಂದ ಅವರಿಗೆ ಅನರ್ಹತೆ ಅನ್ವಯವಾಗುವುದಿಲ್ಲ. ಸಚಿವ ಸ್ಥಾನಕ್ಕೆ ಎಚ್.ವಿಶ್ವನಾಥ್ ಹೆಸರು ಸೂಚಿಸುವ ಮುನ್ನ ಅನರ್ಹತೆ ಪರಿಗಣಿಸುವಂತೆ ಕೋರ್ಟ್ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications