ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಮತ್ತಷ್ಟು ವಿಳಂಬ?
ಬೆಳಗಾವಿ, ಅಕ್ಟೋಬರ್ 14; ಬಹುನಿರೀಕ್ಷಿತ ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಯೋಜನೆ ಮತ್ತಷ್ಟು ವಿಳಂಬವಾಗಲಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಕನಸಿನ ಯೋಜನೆ ಇದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿನ ಭೂ ಸ್ವಾಧೀನ ಪ್ರಕ್ರಿಯೆಯ ಕಾರಣದಿಂದಾಗಿ ಯೋಜನೆ ವಿಳಂಬವಾಗಲಿದೆ.
ನೈಋತ್ಯ ರೈಲ್ವೆ ಧಾರವಾಡ-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಯ ಅಲೈನ್ ಮೆಂಟ್ ಬದಲಾವಣೆ ಮತ್ತು ಮರು ಸಮೀಕ್ಷೆ ಕೈಗೊಳ್ಳಲಿದ್ದು, ಇದರಿಂದಾಗಿ ಯೋಜನೆ ವಿಳಂಬವಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸ ಸಮೀಕ್ಷೆ ಬಳಿಕ ಯೋಜನಾ ವೆಚ್ಚ 250 ಕೋಟಿ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಇದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.
ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಯೋಜನೆ ಕುರಿತು ವಿಸ್ತೃತ ಯೋಜನೆ (ಡಿಪಿಆರ್) ಅಂತಿಮಗೊಂಡಿತ್ತು. 927 ಕೋಟಿ ವೆಚ್ಚದ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರವೂ ಒಪ್ಪಿಗೆ ನೀಡಿತ್ತು. ಭೂ ಸ್ವಾಧೀನದ ವಿಚಾರದಲ್ಲಿ ಕೆಲವು ಬದಲಾವಣೆ ಆಗಬೇಕಿದ್ದು, ಆದ್ದರಿಂದ ಮರು ಸಮೀಕ್ಷೆ ನಡೆಸಲಾಗುತ್ತದೆ.
ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ರೈಲು ಮಾರ್ಗ ಯೋಜನೆಗೆ ಕೆಕೆ ಕೊಪ್ಪ ಬಳಿ ಹೆಚ್ಚುವರಿ ಭೂಮಿ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಪಕ್ಕದ ಸರ್ಕಾರಿ ಭೂಮಿ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿಯೂ ಉಳಿತಾಯವಾಗುತ್ತದೆ. ರೈತರಿಗೂ ಅನುಕೂಲವಾಗುತ್ತದೆ. ಈ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಹೇಳಿದ್ದಾರೆ.

73 ಕಿ. ಮೀ. ಉದ್ದದ ನೇರ ಮಾರ್ಗ
73 ಕಿ. ಮೀ. ಉದ್ದದ ಧಾರವಾಡ-ಬೆಳಗಾವಿ ರೈಲು ಮಾರ್ಗದ ಯೋಜನೆಗೆ 827.78 ಎಕರೆ ಭೂಮಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ 255.93 ಎಕರೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ 601 ಎಕರೆ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಈಗ ನೈಋತ್ಯ ರೈಲ್ವೆ ಕೆಕೆ ಕೊಪ್ಪ ಬಳಿ ಮರು ಸಮೀಕ್ಷೆ ನಡೆಸಿದರೆ ಎಷ್ಟು ಭೂಮಿ ಅಗತ್ಯವಿದೆ? ಎಂದು ಸ್ಪಷ್ಟವಾದ ಚಿತ್ರಣ ಲಭ್ಯವಾಗಲಿದೆ.

ಮರು ಸಮೀಕ್ಷೆ ಏಕೆ?
ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಧಾರವಾಡ-ಬೆಳಗಾವಿ ರೈಲು ಮಾರ್ಗ ಹಾದು ಹೋಗಲಿದೆ. ಇದಕ್ಕೆ ಸಾಕಷ್ಟು ಕೃಷಿ ಭೂಮಿ ಬಳಕೆಯಾಗಲಿದೆ. ಜನಪ್ರತಿನಿಧಿಗಳು ಕೃಷಿ ಭೂಮಿ ಕೈ ಬಿಟ್ಟು ಪಕ್ಕದ ಸರ್ಕಾರಿ ಭೂಮಿ ಬಳಕೆಗೆ ಸಲಹೆ ನೀಡಿದ್ದರು. ಇದರಿಂದ ರೈಲು ಮಾರ್ಗದ 5 ರಿಂದ 6 ಕಿ. ಮೀ. ಅಂತರ ಕಡಿಮೆಯಾಗಲಿದೆ ಎಂದು ಹೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ರೈಲ್ವೆ ಇಲಾಖೆ ಮರು ಸಮೀಕ್ಷೆ ಮಾಡಿತ್ತು. ಆದರೆ ಒಟ್ಟು ಯೋಜನಾ ವೆಚ್ಚ ಸುಮಾರು 250 ಕೋಟಿ ಹೆಚ್ಚಾಗಲಿದೆ ಎಂದು ಹೇಳಿತ್ತು.

ಹೆಚ್ಚುವರಿ ವೆಚ್ಚಕ್ಕೆ ಮತ್ತೆ ಆಕ್ಷೇಪ
ಪ್ರಸ್ತಾವಿತ ರೈಲು ಮಾರ್ಗ 5 ರಿಂದ 6 ಕಿ. ಮೀ. ಕಡಿಮೆಯಾಗಲಿದೆ. ಕೃಷಿ ಬಳಕೆ ಮಾಡದ ಕಾರಣ ರೈತರಿಗೆ ಕೊಡಬೇಕಾದ ಪರಿಹಾರವೂ ಉಳಿತಾಯವಾಗಲಿದೆ. ಆದರೆ ಯೋಜನಾ ವೆಚ್ಚ 250 ಕೋಟಿ ಹೆಚ್ಚಾಗುವುದು ಹೇಗೆ? ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ಆದ್ದರಿಂದ ಮರು ಸಮೀಕ್ಷೆ ಕೈಗೊಂಡು ವೆಚ್ಚ ಹೆಚ್ಚಳವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜನಪ್ರತಿನಿಧಿಗಳು ಸಲಹೆ ಕೊಟ್ಟಿದ್ದಾರೆ. ಇದಕ್ಕೆ ನೈಋತ್ಯ ರೈಲ್ವೆ ಒಪ್ಪಿಗೆ ಕೊಟ್ಟಿದ್ದು, ಪುನಃ ಸಮೀಕ್ಷೆ ಮಾಡುವುದಾಗಿ ಹೇಳಿದೆ. ಆದರೆ ಸಮೀಕ್ಷೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಯೋಜನೆ ಮತ್ತಷ್ಟು ವಿಳಂಬ
ಹೊಸ ಸಮೀಕ್ಷೆ ನಡೆದರೆ ಅದಕ್ಕೆ ತಕ್ಕಂತೆ ಮಾರ್ಗದ ವಿನ್ಯಾಸ ಮತ್ತು ಮರು ಅಲೈನ್ಮೆಂಟ್ ಆಗಬೇಕು. ಬಳಿಕ ಭೂ ಸ್ವಾಧೀನ ಪಡಿಸಿಕೊಳ್ಳಬೇಕು. ಬಳಿಕ ಭೂಮಿ ರೈಲ್ವೆಗೆ ಹಸ್ತಾಂತರಗೊಳ್ಳಬೇಕು. ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕಿದೆ. ಧಾರವಾಡ ಜಿಲ್ಲೆಯಲ್ಲಿ ರೈಲು ಮಾರ್ಗಕ್ಕೆ ಬೇಕಾದ ಭೂ ಸ್ವಾಧೀನ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿಯೇ ಸಮಸ್ಯೆ ಉಂಟಾಗಿದೆ. ಹೊಸ ಸಮೀಕ್ಷೆಯ ಕಾರಣ ಧಾರವಾಡ-ಬೆಳಗಾವಿ ರೈಲು ಯೋಜನರ ಮತ್ತಷ್ಟು ವಿಳಂಬವಾಗಲಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications