ಖಾನಾಪುರದಲ್ಲಿ ಎಂಇಎಸ್ನಿಂದ ಬಿಜೆಪಿಗೆ ಸಂಕಷ್ಟ: ಕಾಂಗ್ರೆಸ್ನ ಅಂಜಲಿ ನಿಂಬಾಳ್ಕರ್ ಗೆಲುವಿನ ಸಾಧ್ಯತೆ ಹೆಚ್ಚಿಸಿದ ಲೆಕ್ಕಾಚಾರ
ಬೆಳಗಾವಿ, ಮೇ 02: ರಾಜ್ಯದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರವೂ ಒಂದು. ಮರಾಠಾ ಸಮುದಾಯದ ಪ್ರಾಬಲ್ಯವಿರುವ ಕ್ಷೇತ್ರವು ಎಂಇಎಸ್ನ ಭದ್ರಕೋಟೆ ಎಂದೆ ಪರಿಣಿಸಲ್ಪಟ್ಟಿತ್ತು. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿತು.
ಕಾಂಗ್ರೆಸ್ ಹಾಲಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಕಳೆದ ಚುನಾವಣೆಯಲ್ಲಿ ಆಯ್ಕೆಯಾದರು. ಇವರ ವಿರುದ್ಧ ಬಿಜೆಪಿಯಿಂದ ವಿಠ್ಠಲ್ ಹಾಲ್ಗೇಕರ್ ಕಣಕ್ಕಿಳಿದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಡಾ.ಅಂಜಲಿ ನಿಂಬಾಳ್ಕರ್, ಬಿಜೆಪಿಯಿಂದ ವಿಠ್ಠಲ್ ಹಾಲ್ಗೇಕರ್, ಜೆಡಿಎಸ್ನಿಂದ ನಾಸೀರ್ ಬಾಪುಲಸಾಬ್ ಭಗವಾನ್ ಹಾಗೂ ಎಂಇಎಸ್ನಿಂದ ಮುರಳೀಧರ ಪಾಟೀಲ್ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವು ತೀವ್ರ ಪೈಪೋಟಿಯ ಕಣವಾಗಿ ಮಾರ್ಪಟ್ಟಿದೆ.

ಈ ಕ್ಷೇತ್ರದಲ್ಲಿ ಮರಾಠಿ ಸಮುದಾಯವು 82,000 ಮತದಾರರನ್ನು ಹೊಂದಿದೆ. ಈಗ ಕಣಕ್ಕಿಳಿದಿರುವ ನಾಲ್ಕು ಪ್ರಮುಖ ಅಭ್ಯರ್ಥಿಗಳಲ್ಲಿ ಮೂವರು ಮರಾಠಿ ಸಮುದಾಯದವರಾಗಿದ್ದಾರೆ. ಈ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು 28,000 ರಷ್ಟಿದ್ದಾರೆ. ಇದು ಎರಡನೇ ಅತಿ ದೊಡ್ಡ ಸಮಯದಾಯವಾಗಿದೆ.
25,000 ಎಸ್ಸಿ/ಎಸ್ಟಿ ಮತದಾರರು, 24,000 ಲಿಂಗಾಯತರು, 16,000 ಹಣಬರರು, 13,000 ಕ್ರಿಶ್ಚಿಯನ್ನರು, 8,000 ಜೈನರು, ಬ್ರಾಹ್ಮಣರು ಮತ್ತು ವಿಶ್ವಕರ್ಮರು ತಲಾ 4,000 ಮತದಾರರಿದ್ದಾರೆ.
ಟಿಕೆಟ್ ವಿಚಾರವಾಗಿ ಕಾಂಗ್ರೆಸ್, ಜೆಡಿ(ಎಸ್) ಮತ್ತು ಎಂಇಎಸ್ ಪಕ್ಷಗಳಲ್ಲಿ ಯಾವುದೇ ಗೊಂದಲಗಳು ಉದ್ಬವಿಸಿರಲಿಲ್ಲ. ಆದರೆ, ಬಿಜೆಪಿಯಲ್ಲಿ ಡಾ.ಸೋನಾಲಿ ಸರ್ನೋಬತ್, ಮಾಜಿ ಶಾಸಕ ಅರವಿಂದ ಪಾಟೀಲ್ ಮತ್ತು ವಿಠ್ಠಲ್ ಹಲಗೇಕರ್ರಂತಹ ಪ್ರಬಲ ಟಿಕೆಟ್ ಆಕಾಂಕ್ಷಿಗಳಿದ್ದರು. ಅಂತಿಮವಾಗಿ, ಪಕ್ಷವು ಹಲಗೇಕರ್ಗೆ ಆದ್ಯತೆ ನೀಡಿತು. 2018ರ ಚುನಾವಣೆಯಲ್ಲಿ ಹಲಗೇಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ನಿಂಬಾಳ್ಕರ್ ವಿರುದ್ಧ 5,000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಈ ಹಿನ್ನೆಲೆಯಲ್ಲಿ ಖಾನಪುರ ಬಿಜೆಪಿ ಅಸಮಾಧಾನಗಳಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇನ್ನು ಕ್ಷೇತ್ರದಲ್ಲಿ ಎಂಇಎಸ್ ಸ್ಪರ್ಧಿಸುತ್ತಿದೆ. ಇದು ಬಿಜೆಪಿ ಮತದಾರರನ್ನು ಸೆಳೆಯುವ ಸಾಧ್ಯತೆ ಇದೆ. ಪಕ್ಷದೊಳಗಿನ ಅಸಮಾಧಾನ ಹಾಗೂ ಎಂಇಎಸ್ ಮತಗಳನ್ನು ಸೆಳೆಯುದರಿಂದ ಬಿಜೆಪಿ ದೊಡ್ಡ ಸಂಕಷ್ಟವನ್ನು ಎದುರಿಸುವ ಸಂಭವವಿದೆ.
ಇನ್ನು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಎರಡನೇ ಅತಿ ದೊಡ್ಡ ಸಮುದಾಯವಾದ ಮುಸ್ಲಿಮರು ಜೆಡಿಎಸ್ಗೆ ಮತ ನೀಡಬಹುದು. ಆದರೆ, ಇಲ್ಲಿ ಜೆಡಿಎಸ್ಗೆ ಬೆಂಬಲ ಸಿಗುವುದು ಕಷ್ಟಸಾಧ್ಯವೆಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ ಅಂಜಲಿ ನಿಂಬಾಳ್ಕರ್ ಅವರು ಎರಡನೇ ಬಾರಿಗೆ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ. ಡಾ ನಿಂಬಾಳ್ಕರ್ ಅವರು ವಿಧಾನಸಭೆಯಲ್ಲಿ ಸಾಕಷ್ಟು ಬಾರಿ ಮಹಿಳೆಯರ ಪರ ಮಾತನಾಡಿದ್ದಾರೆ. ಕ್ಷೇತ್ರದ ವಿವಿಧ ಯೋಜನೆಗಳ ಬಗ್ಗೆ ಕಾಳಜಿವಹಿಸಿದ್ದಾರೆ. ವಿಶೇಷವಾಗಿ ಪರಿಸರ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ನಿಂಬಾಳ್ಕರ್ ಅವರು ಶಾಸಕರಾಗಿದ್ದ ಅವಧಿಯಲ್ಲಿ ಖಾನಾಪುರದ ಹಲವು ಒಳ ರಸ್ತೆಗಳು ಮೊದಲ ಬಾರಿಗೆ ಡಾಂಬರ್ ಕಂಡಿವೆ ಎಂದು ಕ್ಷೇತ್ರದ ಜನರು ಹೇಳಿದ್ದಾರೆ. ಇದು ಡಾ ಅಂಜಲಿ ನಿಂಬಾಳ್ಕರ್ ಅವರ ಗೆಲುವಿನ ಸಾಧ್ಯತೆಯನ್ನು ಹೆಚ್ಚಿಸಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications