Actor Darshan Case: ಬೆಂಗಳೂರಿನಿಂದ 550 ಕಿಲೋ ಮೀಟರ್ ದೂರದಲ್ಲಿದ್ದೇವೆ: ಸತೀಶ್ ಜಾರಕೀಹೊಳಿ ಹೀಗೆ ಹೇಳಿದ್ಯಾಕೆ?
Actor Darshan Case: ರೇಣುಕಾಸ್ವಾಮಿ ಕೋಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಅವರನ್ನು ಬಂಧಿಲಾಗಿದ್ದು, ಈ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಲಿದೆ. ಇನ್ನು ಈ ಬಗ್ಗೆ ಹಲವರ ಪ್ರತಿಕ್ರಿಯೆಗಳು ನಗೆಪಾಟಲಿಗೆ ಕಾರಣವಾದರೆ, ಇನ್ನು ಕೆಲವು ಹೇಳಿಕೆಗಳು ಅಚ್ಚರಿ ಮೂಡಿಸುವಂತಿವೆ. ಹಾಗೆಯೇ ಇದೀಗ ಸಚಿವ ಸತೀಶ್ ಜಾರಕಿಹೊಳಿಯವರು ನೀಡಿರುವ ಹೇಳಿಕೆಯೊಂದು ಭಾರೀ ನಗೆಪಾಟಲಿಗೆ ಕಾರಣವಾಗಿದೆ.

ದರ್ಶನ್ ಪ್ರಕರಣದ ಬಗ್ಗೆ ಏನು ಹೇಳುತ್ತೀರಾ ಎಂದು ಬೆಳಗಾವಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ ಅವರು, ನಾವು ಬೆಂಗಳೂರಿನಿಂದ 550 ಕಿಲೋ ಮೀಟರ್ ದೂರದಲ್ಲಿದ್ದೇವೆ. ಈ ಬಗ್ಗೆ ಏನು ಹೇಳಲಿ, ನಮಗೆ ಹೇಗೆ ಗೊತ್ತಾಗಬೇಕು. ಒಂದು ವೇಳೆಗೆ ಈ ಬಗ್ಗೆ ಬೆಂಗಳೂರಿನಲ್ಲಿರುವವರನ್ನೇ ಕೇಳಿ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.
ಮೃತ ರೇಣುಕಾ ಸ್ವಾಮಿ ಮನೆಗೆ ಫಿಲ್ಮ್ ಚೇಂಬರ್ ತಂಡ ಭೇಟಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕುಟುಂಬಕ್ಕೆ ಫಿಲಂ ಚೇಂಬರ್ ತಂಡ ಭೇಟಿ ನೀಡಿದೆ.
ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತನ ನಿವಾಸಕ್ಕೆ ಭೇಟಿ ನೀಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ಸುರೇಶ್ ಹಾಗೂ ತಂಡದವರು ಮೃತನ ಪೋಷಕರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಧನಸಹಾಯ ಮಾಡಿದರು.
ಇನ್ನು ಫಿಲ್ಮ್ ಚೇಂಬರ್ ಅಧ್ಯಕ್ಷರು ಹಾಗೂ ತಂಡದ ಮುಂದೆ ಮೃತನ ಪೋಷಕರು ಮಗನ ಸಾವಿನ ಬಗ್ಗೆ ಕಣ್ಣೀರು ಹಾಕಿದರು. ನನ್ನ ಮಗ ತಪ್ಪು ಮಾಡಿದ್ದರೆ ನಮಗೆ ತಿಳಿಸಬಹುದಿತ್ತು ಅಥವಾ ಪೊಲೀಸ್ ಕಂಪ್ಲೇಂಟ್ ಮಾಡಬಹುದಿತ್ತು. ಆದರೆ ಕೊಲೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಪೋಷಕರು ಕಣ್ಣೀರಿಟ್ಟರು. ಈ ವೇಳೆ ಮೃತನ ಪೋಷಕರು ಹಾಗೂ ಪತ್ನಿಗೆ ತಲಾ ಎರಡೂವರೆ ಲಕ್ಷ ರೂಪಾಯಿ ಧನಸಹಾಯ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಲನ ಚಿತ್ರ ರಂಗದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ.ಎನ್. ಸುರೇಶ್ ನಡೆದಿರುವ ಘಟನೆಗೆ ಕ್ಷಮಾಪಣೆ ಕೇಳಿದರು. ಸಿನಿಮಾ ಇಂಡಸ್ಟ್ರಿಯಿಂದ ದರ್ಶನ್ ಬ್ಯಾನ್ ಮಾಡುವ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ನಿರ್ಮಾಪಕರ ಬಳಿ ಚರ್ಚೆ ಮಾಡಬೇಕು. ಪೊಲೀಸರು ಹಾಕುವ ಚಾರ್ಚ್ ಶೀಟ್ ನೋಡಿ ನಿರ್ಧಾರ ಮಾಡಬೇಕು ಎಂದರು.
ನಾವು ಇಂದು ಚಲನ ಚಿತ್ರ ರಂಗವನ್ನು ಉಳಿಸಬೇಕಿದೆ. ಯಾರೊಬ್ಬರಿಗೋ ನಾವು ತಗ್ಗುವುದಿಲ್ಲ. ಕನ್ನಡ ಚಲನಚಿತ್ರರಂಗ ಇಂದು ಅಳಿವಿನ ಅಂಚಿನಲ್ಲಿದ್ದು, ಅದನ್ನು ಉಳಿಸಬೇಕಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications