ಬೆಳಗಾವಿ : ಖಾಸಗಿ ವೈದ್ಯರ ಮುಷ್ಕರ, ಸಿಎಂ ಮಧ್ಯಸ್ಥಿಕೆಗೆ ಮನವಿ

ಬೆಳಗಾವಿ, ನವೆಂಬರ್ 13 : ಬೆಳಗಾವಿಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕೆಎಂಪಿಎ ಕಾಯ್ದೆ ತಿದ್ದು ಪಡಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳ ಆಸ್ಪತ್ರೆಗಳ ವೈದ್ಯರ ಕೊರತೆ ಎದುರಾಗಿದೆ..

ಬೆಳಗಾವಿ ಚಲೋ ಎಂಬ ಘೋಷಣೆಯಡಿಯಲ್ಲಿ ನೂರಾರು ವೈದ್ಯರು ಬೆಳಗಾವಿಗೆ ಆಗಮಿಸಿದ್ದು, ತಾರಿಹಾಳದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಗೊಂದಲ ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Doctors seeks CM intervention in KMPA at issue

ಮಾಧ್ಯಮಗಳ ಜೊತೆ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಎಚ್.ಎನ್.ರವೀಂದ್ರ ಅವರು, 'ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಸಮಿತಿಯ ವರದಿಯನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಬೇಕು' ಎಂದು ಸರ್ಕಾರವನ್ನು ಒತ್ತಾಯಿಸಿದರು.

'ಕರ್ನಾಟಕ ಸರ್ಕಾರ ವೈದ್ಯರನ್ನು ಬೀದಿಗೆ ತಂದು ನಿಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕು' ಎಂದು ಆಗ್ರಹಿಸಿದರು.

ಸುವರ್ಣವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು, 'ವೈದ್ಯರು ಪ್ರತಿಭಟನೆ ನಡೆಸಲಿ ಸಂತೋಷ. ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ. ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ಸಾಮಾನ್ಯ. ಕೆಎಂಪಿಎ ಕಾಯ್ದೆ ತಿದ್ದುಪಡಿ ಕುರಿತು ಸದಸ ಸಮಿತಿ ವರದಿ ಬಂದಿದೆ. ಈ ಬಗ್ಗೆ ಸದನ ತೀರ್ಮಾನ ಮಾಡಲಿದೆ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+