ಬೆಳಗಾವಿ : 'ಸರ್ಕಾರ ಸತ್ತು ಸ್ಮಶಾನ ಸೇರಿದೆ'
ಬೆಳಗಾವಿ, ನವೆಂಬರ್ 17 : ಇಂದು (ನವೆಂಬರ್ 17) ಕಲಾಪ ಆರಂಭವಾದ ಕೆಲವೇ ಹೊತ್ತಿನಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ವೈದ್ಯರ ಮುಷ್ಕರದ ವಿಷಯ ಪ್ರಸ್ತಾಪಿಸಿದರು. ಜಗದೀಶ್ ಶೆಟ್ಟರ್ ಅವರ ಜೊತೆಗೆ ಬಿ.ಜೆ.ಪಿ, ಜೆಡಿಎಸ್ ನ ಇತರ ಶಾಸಕರೂ ಸೇರಿ ಸರ್ಕಾರದ ಮೇಲೆ ಪ್ರಶ್ನೆಗಳ ಬಾಣಗಳನ್ನು ಎಸೆದರು.
ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಮುಷ್ಕರ ಎಲ್ಲಿಯವರೆಗೂ ಬಂದಿದೆ?, ಸರ್ಕಾರ ವೈದ್ಯರೊಂದಿಗೆ ಮಾತುಕತೆ ನಡೆಸಿದೆಯಾ? ಎಂದು ಸರಣಿ ಪ್ರಶ್ನೆಗಳನ್ನು ಅವರು ಸರ್ಕಾರದತ್ತ ಜಗದೀಶ್ ಶೆಟ್ಟರ್ ತೂರಿ ಬಿಟ್ಟರು.
ಜಗದೀಶ್ ಶೆಟ್ಟರ್ ಅವರ ಪ್ರಶ್ನೆಗಳಿಗೆ ಸ್ಪೀಕರ್ ಅವರು ಸರ್ಕಾರದಿಂದ ಉತ್ತರ ಕೊಡಿಸುತ್ತೇನೆ ಎಂದರು.

ನಂತರ ಮಾತನಾಡಿದ ಸಿ.ಟಿ.ರವಿ ಅವರು ಸೂಕ್ತ ಚಿಕಿತ್ಸೆ ಇಲ್ಲದೆ ಸಾವನ್ನಪ್ಪಿರುವವ ಸಂಖ್ಯೆ 46ಕ್ಕೆ ಏರಿದೆ ಸರ್ಕಾರ ಏನು ಮಾಡುತ್ತಿದೆ ಎಂದರು.
ಶಾಸಕ ಕಾಗೇರಿ ಅವರು ಸರ್ಕಾರ ಇದೆಯಾ? ಅಥವಾ ಏನಾಗಿದೆ. ಸರ್ಕಾರ ಐಸಿಯುನಲ್ಲಿ ಕೂಡ , ಸರ್ಕಾರ ಸತ್ತುಹೋಗಿದೆ, ಸರ್ಕಾರ ಸ್ಮಶಾನದಲ್ಲಿದೆ ಎಂದು ಕಠು ಟೀಕೆ ಮಾಡಿದರು.
ಸಿ.ಟಿ.ರವಿ ಅವರ ಪ್ರಶ್ನೆಗೆ ಪ್ರತ್ಯುತ್ತರ ನೀಡಿದ ಆಡಳಿತ ಪಕ್ಷದ ಸದಸ್ಯರು, "ಕೇಂದ್ರದ ಬಿ.ಜೆ.ಪಿ ಸರ್ಕಾರ ನೋಟ್ ಬ್ಯಾನ್ ಮಾಡಿದಾಗ ಎಷ್ಟು ಜನ ಸತ್ತರು, ಆಗ ಮೌನವಾಗಿದ್ದಿರಲ್ಲ ನೀವು? ಎಂದು ಮರು ಪ್ರಶ್ನೆ ಎಸೆದರು.
ಆದರೆ ಇಷ್ಟಕ್ಕೆ ಪಟ್ಟು ಸಡಿಲಿಸದ ವಿಪಕ್ಷಗಳು ಸರ್ಕಾರವು ಸರಿಯಾದ ಉತ್ತರ ನೀಡಲೇಬೆಂದು ಪಟ್ಟು ಹಿಡಿದವು.
ಆಗ ಮಧ್ಯ ಪ್ರವೇಶಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಈಗಾಗಲೇ ಎಲ್ಲಾ ಓ.ಪಿ.ಡಿಗಳು ತೆರೆದಿವೆ, ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸಮಸ್ಯೆ ಆಗುತ್ತಿಲ್ಲ. ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಸಂಜೆ ಒಳಗೆ ಸಮಸ್ಯೆ ಪರಿಹಾರವಾಗುತ್ತದೆ, ವೈದ್ಯ ಸಂಘಟನೆಯ ಮುಖಂಡರು ಬೆಂಗಳೂರಿನಿಂದ ಬರುತ್ತಿದ್ದಾರೆ ಹಾಗಾಗಿ ತಡವಾಗುತ್ತಿದೆ ಎಂದು ವಿಪಕ್ಷಗಳನ್ನು ಶಾಂತಗೊಳಿಸಲು ಯತ್ನಿಸಿದರು.
ಇಷ್ಟಕ್ಕೂ ಸುಮ್ಮನಾಗದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ 'ಒಂದು ಬಿಲ್ ತರದಿದ್ರೆ ದೊಡ್ಡ ಅನಾಹುತ ಆಗೋದಿಲ್ಲ, ವೈದ್ಯರೆಲ್ಲ ಬೀದಿಯಲ್ಲಿ ಕುಳಿತಿದ್ದಾರೆ, ಒಂದು ಸ್ಪಷ್ಟತೆ ಇರಲಿ, ಒಂದೊ ಬಿಲ್ ಮುಂದಿನ ಅಧಿವೇಶನದಲ್ಲಿ ತರ್ತೇವೆ ಅಂತಾ ಹೇಳಿ, ಇಲ್ಲ ವೈದ್ಯರೊಂದಿಗೆ ಮಾತಾಡಿ' ಎಂದು ಛಾಟಿ ಬೀಸಿದರು.
ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಕೋಳಿವಾಡ ಅವರು ಪರಿಸ್ಥಿತಿಯನ್ನು ಶಾಂತಗೊಳಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications