ಪರಿಸರಸ್ನೇಹಿ ಕಟ್ಟಡಕ್ಕೆ ಬೆಳಗಾವಿ ಪಾಲಿಕೆಯಿಂದ ಶೇ 10 ಆಸ್ತಿ ತೆರಿಗೆ ರಿಯಾಯ್ತಿ
ಬೆಳಗಾವಿ, ಫೆಬ್ರವರಿ 8: ಬೆಳಗಾವಿ ನಗರದಲ್ಲಿ ಪರಿಸರ ಸ್ನೇಹಿಯಾಗಿ ಕಟ್ಟಡ ನಿರ್ಮಾಣ ಮಾಡಿದ ಮಾಲೀಕರಿಗೆ ಆಸ್ತಿ ತೆರಿಗೆಯಲ್ಲಿ ಶೇ 10ರಷ್ಟು ವಿನಾಯಿತಿ ನೀಡುವುದಾಗಿ ಬೆಳಗಾವಿ ನಗರಪಾಲಿಕೆ ಘೋಷಿಸಿದೆ. ಕಟ್ಟಡ ನಿರ್ಮಾಣದಿಂದ ಪರಿಸರಕ್ಕೆ ಹಾನಿಯಾಗಬಾರದು ಎಂದು ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತೆರಿಗೆ, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ರತನ್ ಮಸೇಕರ್ ತಿಳಿಸಿದ್ದಾರೆ.
ಇದೇ ರೀತಿ ಸ್ವಾತಂತ್ರ್ಯ ಹೋರಾಟಗಾರರಿಗೆ ಕೂಡ ಆಸ್ತಿ ತೆರಿಗೆಯಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ. ಇನ್ನು ಬೆಳಗಾವಿ ನಗರದಲ್ಲಿ ನಿರ್ಮಿಸುವ 4 ಸಾವಿರ ಚದರಡಿ ಮೇಲ್ಪಟ್ಟ ಕಟ್ಟಡಕ್ಕೆ ಅನುಮೋದನೆಯಾದ ನಕ್ಷೆ ಕಡ್ಡಾಯ ಎಂದು ಕೂಡ ನಿರ್ಧರಿಸಲಾಗಿದೆ.[ಬೆಳಗಾವಿ ಜಾನುವಾರು ಆಸ್ಪತ್ರೆ ನಿರ್ಮಾಣ ಯಾವಾಗ?]

ನಗರ ವ್ಯಾಪ್ತಿಯಲ್ಲಿರುವ ಆಸ್ತಿಗಳ ಮರುಸರ್ವೇಗೆ ಪಾಲಿಕೆ ನಿರ್ಧರಿಸಿದ್ದು, ಜತೆಗೆ ಶೇ 15ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕೂಡ ತೀರ್ಮಾನ ಕೈಗೊಂಡಿದ್ದು, ಆಸ್ತಿ ತೆರಿಗೆ ಸಂಗ್ರಹದ ಮೊತ್ತವನ್ನು 35 ಕೋಟಿ ರುಪಾಯಿಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. 2017-18ನೇ ಸಾಲಿನಿಂದ ಆಸ್ತಿ ತೆರಿಗೆಯ ಚಲನ್ ಗಳನ್ನು ಗಣಕೀಕೃತ ಮತ್ತು ಡಿಜಿಟಲೈಸ್ ಮಾಡಿ, ವಿತರಿಸಲಾಗುತ್ತದೆ.[ಹಿಂಡಲಗಾ ಜೈಲಿನಿಂದ ಎಸ್ಕೇಪ್ ಪ್ಲಾನ್: ಬೆಳಗಾವಿ ಪೊಲೀಸರಿಂದ ತಪಾಸಣೆ]
ಮಾಳಮಾರುತಿ ಬಡಾವಣೆಯಲ್ಲಿ ನಿವೇಶನಗಳನ್ನು ಮಾರುವ ಮೂಲಕ ಮೂವತ್ತು ಕೋಟಿ ಆದಾಯ ನಗರ ಪಾಲಿಕೆಗೆ ಬರಬಹುದು ಎಂಬ ನಿರೀಕ್ಷೆಯಿದೆ. ನಗರ ಪಾಲಿಕೆಯ ಬಜೆಟ್ ಸಭೆಯಲ್ಲಿ ಆದಾಯ-ವೆಚ್ಚದ ಬಗ್ಗೆ ಮಸೇಕರ್ ಮಂಗಳವಾರ ಮಾಹಿತಿ ನೀಡಿದರು. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿ ಪ್ರಕಟವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications