ಖಾನಾಪುರದ ಅರಣ್ಯಕ್ಕೆ ಅನುಮತಿ ಇಲ್ಲದೆ ಪ್ರವೇಶವಿಲ್ಲ
ಖಾನಾಪುರ, ಏಪ್ರಿಲ್ 13 : ಖಾನಾಪುರ ತಾಲೂಕಿನಲ್ಲಿರುವ ಸಂರಕ್ಷಿತ ಅರಣ್ಯದೊಳಗೆ ಅನುಮತಿ ಇಲ್ಲದೆ ಪ್ರವಾಸಿಗರು ಪ್ರವೇಶ ಮಾಡುವುದನ್ನು ರಾಜ್ಯ ಅರಣ್ಯ ಇಲಾಖೆ ನಿಷೇಧಿಸಿ ಆದೇಶ ಹೊರಡಿಸಿದೆ.
ತಾಲೂಕಿನಲ್ಲಿರುವ ಭೀಮಗಢ ಸಂರಕ್ಷಿತ ಅರಣ್ಯದೊಳಗೆ ಅನುಮತಿ ಇಲ್ಲದೆ ಪ್ರವೇಶ ಮಾಡಿ, ಅರಣ್ಯದ ಪ್ರಶಾಂತತೆಗೆ ಧಕ್ಕೆ ತರುತ್ತಿದ್ದ ಪ್ರವಾಸಿಗರನ್ನು ನಿಯಂತ್ರಿಸುವ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ನಿಷೇಧ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಹೇಳಿದೆ.
ಭೀಮಗಢ ಅರಣ್ಯದಲ್ಲಿರುವ ಅಪೂರ್ವ ಸಸ್ಯ ಸಂಪತ್ತು ಮತ್ತು ವನ್ಯಮೃಗಗಳಿಗೆ ಧಕ್ಕೆಯಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಆದೇಶ ತೆಗೆದುಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸದ್ಯಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಹಳ್ಳಿಗರು ಮಾತ್ರ ಇಲ್ಲಿ ಪ್ರವೇಶಿಸಬಹುದು. [ಪುಣ್ಯಕೋಟಿ ಕೊಂದ ಹುಲಿ ಭೀಮಗಡದಿಂದ ಸ್ಥಳಾಂತರ?]

ಅರಣ್ಯದೊಳಗೆ ಪ್ರವೇಶಿಸುತ್ತಿದ್ದ ಕೆಲ ಪ್ರವಾಸಿಗರು ಹುಚ್ಚುಚ್ಚಾಗಿ ಕಿರುಚಾಡುತ್ತ, ತಾವು ತಂದಿದ್ದ ವಸ್ತುಗಳನ್ನು ಸಿಕ್ಕಲ್ಲಿ ಬಿಸಾಡುತ್ತ ಅಸಭ್ಯವಾಗಿ ವರ್ತಿಸುತ್ತಿದ್ದರು. ಹಲವಾರು ಪ್ರದೇಶಗಳಲ್ಲಿ ಒಡೆದ ಬಾಟಲುಗಳು, ಮದ್ಯದ ಶೀಷೆಗಳು ಕೂಡ ಸಿಕ್ಕಿವೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ ಬಳಿ, ಪಶ್ಚಿಮ ಘಾಟಿಗೆ ಹೊಂದಿಕೊಂಡಿರುವ ಭೀಮಗಢ ಅಭಯಾರಣ್ಯ ಬರುತ್ತದೆ. ಹಲವಾರು ಗುಹೆಗಳಿರುವ ಈ ಪ್ರದೇಶದಲ್ಲಿ, ಅಳಿವಿನಂಚಿನಲ್ಲಿರುವ ಉದ್ದ ಬಾಲವಿರುವ ವಿಶಿಷ್ಟ ಬಗೆಯ ಬಾವಲಿಗಳು ನೆಲೆಸಿರುವುದು ವಿಶೇಷ.
17ನೇ ಶತಮಾನದಲ್ಲಿ ಛತ್ರಪತಿ ಶಿವಾಜಿ ನಿರ್ಮಿಸಿರುವ ಭೀಮಗಢ ಕೋಟೆಯಿಂದಾಗಿ ಈ ಪ್ರದೇಶಕ್ಕೆ ಭೀಮಗಢ ಅರಣ್ಯ ಎಂದು ಹೆಸರು ಬಂದಿದೆ. 2011ರ ಡಿಸೆಂಬರ್ ತಿಂಗಳಲ್ಲಿ ಈ ಕಾಡನ್ನು ಅಭಯಾರಣ್ಯವೆಂದು ರಾಜ್ಯ ಸರಕಾರ ಘೋಷಿಸಿತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications