ರಾಜ್ಯಸಭಾ ಸದಸ್ಯರಾದ ಬಳಿಕ ಬೆಳಗಾವಿಗೆ ಆಗಮಿಸಿದ ಈರಣ್ಣ ಕಡಾಡಿ
ಬೆಳಗಾವಿ, ಜೂನ್ 13: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ಬಿಜೆಪಿಯ ಮುಖಂಡ ಈರಣ್ಣ ಕಡಾಡಿ ಅವರು ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಬೆಳಗಾವಿಗೆ ಬರಮಾಡಿಕೊಂಡರು.
Recommended Video
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರ ರಾಣಿ ಕಿತ್ತೂರು ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತ ರಾಜ್ಯಸಭಾ ಪ್ರವೇಶ ಮಾಡಲು ಬಿಜೆಪಿ ಅವಕಾಶ ಕೊಟ್ಟಿದೆ, ಕಾರ್ಯಕರ್ತರ ಬಲ, ನಾಯಕರ ಸಹಕಾರದ ಮೂಲಕ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕರ್ತರು, ನಾಯಕರ ಆಪೇಕ್ಷೆಯಂತೆ ಕೆಲಸ ಮಾಡುವ ಸಂಕಲ್ಪದೊಂದಿಗೆ ಪ್ರವಾಸ ಆರಂಭಿಸಿದ್ದೇನೆ, ಇಲ್ಲಿಯವರೆಗೆ ರಾಜ್ಯಸಭೆ ಎಂದರೆ ಬೇರೆಯದೇ ಕಲ್ಪನೆ ಇತ್ತು, ಸಾಮಾನ್ಯರೂ ರಾಜ್ಯಸಭೆ ಪ್ರವೇಶಿಸಬಹುದೆಂಬ ಕಲ್ಪನೆಯನ್ನು ಬಿಜೆಪಿ ಹರಿಬಿಟ್ಟಿದೆ, ಉಳಿದ ಪಕ್ಷಗಳಲ್ಲಿಯೂ ಈ ಚರ್ಚೆ ಬಿರುಸಿನಿಂದ ಪ್ರಾರಂಭವಾಗಿದೆ ಎಂದರು.
ಈ ಪರಂಪರೆ ನೀವು ತರಬೇಕೆಂದು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ನಾನು ಕಳೆದ ಹಲವು ದಶಕಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಬೆಳೆದಂತವನು, ಸಾಮಾನ್ಯ ಜನರ, ಕಟ್ಟಕಡೆಯ ವ್ಯಕ್ತಿಯ ಕನಸೇನು ಎಂಬ ಕಲ್ಪನೆ ನನಗಿದೆ. ನಮ್ಮ ರಾಜ್ಯಕ್ಕೆ ಸಮರ್ಪಕ ಅನುದಾನ ತರುವುದು, ಬಳಕೆ ಮಾಡುವುದರಲ್ಲಿ ಬಹಳಷ್ಟು ಸಲ ವಿಫಲರಾಗಿದ್ದೇವೆ, ಅದು ಆಗದಂತೆ ನಾನು ಪ್ರಯತ್ನಿಸುವೆ ಎಂದು ಈರಣ್ಣ ಕಡಾಡಿ ಹೇಳಿದರು.
ವಿಧಾನ ಪರಿಷತ್ ಆಯ್ಕೆಯಲ್ಲೂ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ನಮ್ಮ ಪಕ್ಷ ಕಾರ್ಯಕರ್ತರ ಆಧಾರಿತ ಪಕ್ಷವಾಗಿದೆ. ಕೊಟ್ಟಿರುವ ಅವಕಾಶ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತೇವೆ ಎಂದರು.
ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣಗಳು ಇಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ಅಧ್ಯಕ್ಷರು ಆಗ್ತಾರೆ ಎಂದು ಈರಣ್ಣ ಕಡಾಡಿ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications