ನಕಲಿ ಛಾಪಾಕಾಗದ ಹಗರಣ, ಇನ್ನೂ ಸಿಕ್ಕಿಲ್ಲ ಬಹುಮಾನದ ಹಣ!
ಬೆಳಗಾವಿ, ಅಕ್ಟೋಬರ್ 26 : ಬಹುಕೋಟಿ ರೂಪಾಯಿ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಅಬ್ದುಲ್ ಕರೀಂ ಲಾಲ್ ತೆಲಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತೆಲಗಿಗೆ ಚಿಕಿತ್ಸೆ ಮುಂದುವರೆದಿದೆ.
17 ವರ್ಷಗಳು ಕಳೆದರೂ ಕರೀಂ ಲಾಲ್ ತೆಲಗಿಯನ್ನು ಹಿಡಿಯಲು ಸಹಾಯ ಮಾಡಿದ ಬೆಳಗಾವಿ ಮೂಲದ ಜಯಂತ ತಿನೇಕರರಿಗೆ ಕೇಂದ್ರ ಸರ್ಕಾರದಿಂದ 44 ಕೋಟಿ ಬಹುಮಾನದ ಹಣ ಸಿಕ್ಕಿಲ್ಲ. ಇಂದು ಮಾಧ್ಯಮಗಳ ಮುಂದೆ ಹಗರಣದ ಬಗ್ಗೆ ಮಾಹಿತಿಯನ್ನು ಅವರು ಬಿಚ್ಚಿಟ್ಟಿದ್ದಾರೆ.

ಮೊದಲು ಬೆಳಗಾವಿಯ ಖಾನಾಪುರ ರೈಲು ನಿಲ್ದಾಣದಲ್ಲಿ ಕರೀಂ ಲಾಲ್ ತೆಲಗಿ ಹಲಸಿನ ಹಣ್ಣು ಮಾರುತ್ತಿದ್ದ. ಮುಂದೆ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಆದನು. ಖಾನಾಪುರದಲ್ಲಿ ಆತ ಆಸ್ತಿ ಮಾಡುವುದನ್ನು ನೋಡಿ ಅನುಮಾನಗೊಂಡ ಜಯಂತ ತಿನೇಕರ ಅವರು ಪರಿಶೀಲಿಸಿದಾಗ ತೆಲಗಿ 17 ರಾಜ್ಯಗಳಲ್ಲಿ ಸಾಮ್ರಾಜ್ಯ ಸ್ಥಾಪಿಸಿದ್ದು ಗೊತ್ತಾಗಿತ್ತು.
ತಕ್ಷಣವೇ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಸಾಂಗ್ಲಿಯಾನ ಅವರಿಗೆ ಜಯಂತ ತಿನೇಕರ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ತೆಲಗಿಯನ್ನು ರಾಜಸ್ಥಾನದ ಅಜ್ಮೀರ್ ದರ್ಗಾದಲ್ಲಿ ಬಂಧಿಸಲಾಗುತ್ತದೆ. 2001ರಿಂದ ತೆಲಗಿಯನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದ್ದು ಜಯಂತ ತಿನೇಕರ.
'ಈ ಬಹುಕೋಟಿ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳಾದ ಎಸ್.ಎಂ.ಕೃಷ್ಣ ಮತ್ತು ವಿಲಾಸ್ ರಾವ್ ದೇಶಮುಖ್ ಸೇರಿದಂತೆ ಅನೇಕ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದೆ. ಇದರಿಂದ ಜೀವ ಬೆದರಿಕೆ ಎದುರಿಸುತ್ತಿದ್ದೇನೆ. ಯಾವುದೇ ಕಾರಣವಿಲ್ಲದೇ ನನಗೆ ನೀಡಿದ ಭದ್ರತೆಯನ್ನು ಹಿಂಪಡೆಯಲಾಗಿದೆ' ಎಂದು ಜಯಂತ ತಿನೇಕರ ಹೇಳಿದ್ದಾರೆ.
'ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರ್.ವಿ.ದೇಶಪಾಂಡೆ ಅವರ ವಿರುದ್ಧ ಧ್ವನಿ ಎತ್ತಿದಕ್ಕೆ ನನಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಕಡಿತಗೊಳಿಸಲಾಗಿದೆ' ಎಂದು ತಿನೇಕರ ಆರೋಪಿಸಿದ್ದಾರೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications