ಘಟಪ್ರಭಾ ನದಿ ಪ್ರವಾಹ ಭೀತಿ; ಮನೆಬಿಟ್ಟು ಬೀದಿಯಲ್ಲೇ ಕುಟುಂಬದ ವಾಸ
ಬೆಳಗಾವಿ, ಆಗಸ್ಟ್ 20: ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದ ಹೊರವಲಯದಲ್ಲಿ ನೆರೆಯಿಂದ ತತ್ತರಿಸಿದ ಕುಟುಂಬವೊಂದು ಇದೀಗ ಟ್ರ್ಯಾಕ್ಟರ್ ಟ್ರ್ಯಾಲಿಯನ್ನೇ ಮನೆಯನ್ನಾಗಿಸಿಕೊಂಡು ಅದರಲ್ಲೇ ವಾಸವಾಗಿದೆ. ಕಳೆದ ವರ್ಷ ಪ್ರವಾಹದಿಂದಾಗಿ ಮನೆ ಕಳೆದುಕೊಂಡಿದ್ದ ಇವರು, ಈ ವರ್ಷ ಹೊಸ ಮನೆ ಕಟ್ಟಿಸುತ್ತಿದ್ದರು. ಆದರೆ ಮತ್ತೆ ಪ್ರವಾಹ ಎದುರಾಗಿದೆ.
ಇದೀಗ ಪುಟ್ಟ ಪುಟ್ಟ ಮಕ್ಕಳ ಜೊತೆ ರಸ್ತೆ ಬದಿ ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲೇ ಈ ಕುಟುಂಬ ವಾಸವಾಗಿದೆ. ಘಟಪ್ರಭಾ ನದಿಯ ಪ್ರವಾಹದಿಂದ ಹಡಗಿನಾಳ ಗ್ರಾಮ ಸಂಪೂರ್ಣ ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ ಮಳೆ ತಗ್ಗಿದರೂ ನೀರು ಹಿಂದೆ ಸರಿಯದ ಕಾರಣ ಸಂತ್ರಸ್ತರು ಮನೆ ಬಿಟ್ಟು ರಸ್ತೆ ಬದಿ ವಾಸಮಾಡಬೇಕಾದ ಪರಿಸ್ಥಿತಿ ಬಂದಿದೆ.

ಘಟಪ್ರಭೆ ನೀರು ನುಗ್ಗಿ ಗ್ರಾಮದ ಬಹುತೇಕ ಮನೆಗಳು ಜಲಾವೃತಗೊಂಡಿವೆ. ಮನೆ ಬಿಟ್ಟು ಬಂದಿರುವ ಕುಟುಂಬ ಟ್ರ್ಯಾಕ್ಟರ್ ಟ್ರ್ಯಾಲಿಗೆ ತಾಡಪತ್ರಿ ಕಟ್ಟಿ ಆಶ್ರಯ ಪಡೆದಿದೆ. ಈ ಕುಟುಂಬ ಕಳೆದ ವರ್ಷದ ಪ್ರವಾಹದಲ್ಲಿ ಮನೆ ಕಳೆದುಕೊಂಡಿತ್ತು. ಈಗ ನಿರ್ಮಾಣ ಹಂತದ ಮನೆಯೂ ಜಲಾವೃತಗೊಂಡಿದೆ. ಹೀಗಾಗಿ ಅನಿವಾರ್ಯವಾಗಿಯೇ ಈ ಕುಟುಂಬದವರು ಹೀಗೆ ಆಸರೆ ಪಡೆದಿದ್ದಾರೆ.

ಕಾಳಜಿ ಕೇಂದ್ರ ತೆರೆದಿರುವ ಬಗ್ಗೆ ಮಾಹಿತಿಯೇ ಇಲ್ಲ ಎಂದು ಇವರು ಅಳಲು ತೋಡಿಕೊಂಡಿದ್ದಾರೆ. ಪರಿಹಾರ ಕೇಂದ್ರ ತೆರೆದಿದ್ದರೂ ಜನರಿಗೆ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications