ವಾಹನದಿಂದ ಇಳಿಯದ ಸಂಸದ, ಪಟ್ಟು ಬಿಡದ ರೈತರು; ಮುಂದೇನಾಯ್ತು?
ಬೆಳಗಾವಿ, ಆಗಸ್ಟ್ 18: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕಿತ್ತೂರು ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆ ಹಂತ -3ರ ಅಡಿಯಲ್ಲಿ ಬರುವ ವಿವಿಧ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭಕ್ಕೆ ಸಂಸದ ಅನಂತಕುಮಾರ ಹೆಗಡೆ ಆಗಮಿಸಿದ್ದರು. ಕಾರ್ಯಕ್ರಮವು ಅಂತಿಮ ಹಂತ ತಲುಪುತ್ತಿದ್ದಂತೆ ಸಂಸದರು ಹಾಗೂ ಶಾಸಕ ಮಹಾಂತೇಶ ದೊಡಗೌಡರ ವೇದಿಕೆಯಿಂದ ಕೆಳಗೆ ಬರುತ್ತಿದ್ದರು. ಆಗ ರೈತ ಸಂಘಟನೆಯ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹಾಗೂ ಕಾರ್ಯಕರ್ತರು ತಮ್ಮ ಮನವಿ ನೀಡಲು ಸಂಸದರ ಬಳಿ ದೌಡಾಯಿಸಿದರು.
ಸಂಸದ ಅನಂತಕುಮಾರ ಹೆಗಡೆ ಹಾಗೂ ಶಾಸಕರು ಇವರತ್ತ ಗಮನ ಹರಿಸದೆ ವಾಹನವನ್ನೇರಿ ಕುಳಿತ ಪರಿಣಾಮ ರೈತ ಸಂಘಟನೆಯವರು ಸಂಸದ ಹೆಗಡೆ ಇರುವ ವಾಹನವನ್ನು ಅಡ್ಡಗಟ್ಟಿ ಪ್ರತಿಭಟನೆ ಆರಂಭಿಸಿದರು. ಕೂಡಲೇ ಪೊಲೀಸರು ಆಗಮಿಸಿ ಸಂಸದರಿಗೆ ಹಾಗೂ ಶಾಸಕ ದೊಡಗೌಡರ ಅವರಿಗೆ ಅಲ್ಲಿಂದ ತೆರಳಲು ದಾರಿ ಮಾಡಿ ಕೊಟ್ಟರು. ಆದರೆ ರೈತರ ಸಮಸ್ಯೆ ಕೇಳದೇ ಕಾರಲ್ಲಿ ಹೊರಟ ಅನಂತಕುಮಾರ್ ಹೆಗಡೆ ಅವರ ವರ್ತನೆ ರೈತರ ಆಕ್ರೋಶಕ್ಕೆ ಕಾರಣವಾಯಿತು.

ಈ ಘಟನೆಯಿಂದ ಕುಪಿತಗೊಂಡ ರೈತ ಸಂಘಟನೆಯ ಕಾರ್ಯಕರ್ತರು ಸಂಸದರ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications