ಬೆಳಗಾವಿಯಲ್ಲಿ ಮಗನನ್ನೇ ಬರ್ಬರವಾಗಿ ಕೊಂದ ತಂದೆ

ಬೆಳಗಾವಿ, ಅಕ್ಟೋಬರ್ 7: ಆಸ್ತಿ ವಿವಾದದ ಕಾರಣಕ್ಕೆ ತಂದೆಯೇ, ಮಲಗಿದ್ದ ಮಗನ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಣದಾಳ ಗ್ರಾಮದಲ್ಲಿ ಇಂದು ನಡೆದಿದೆ.

ಖಣದಾಳ ಗ್ರಾಮದ ಅಲಗೌಡ ಚನ್ನಪ್ಪಾ ಅಂಜುರೆ (38) ಕೊಲೆಯಾದ ವ್ಯಕ್ತಿ. ತಂದೆ ಚನ್ನಪ್ಪಾ ಹಾಗೂ ಮಗ ಅಲಗೌಡ ಚನ್ನಪ್ಪಾ ಅಂಜುರೆ ನಡುವೆ ಜಮೀನು ಹಾಗೂ ಹಣ ಕಾಸಿನ ವಿಚಾರದಲ್ಲಿ ನಿರಂತರವಾಗಿ ಜಗಳ ನಡೆಯುತ್ತಲೇ ಇತ್ತು. ಈ ಕುರಿತು ಗ್ರಾಮಸ್ಥರ ಸಮ್ಮುಖದಲ್ಲಿ ಇಬ್ಬರ ರಾಜಿ ಸಂಧಾನ ಕೂಡ ನಡೆದಿದೆ.

Belagavi: Father Killed His Son Brutally For Property Dispute In Raybaga

ಆದರೆ ನಿನ್ನೆ ಮತ್ತೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಇಂದು ಬೆಳಗ್ಗೆ ಮಗ ಅಲಗೌಡ ಮಲಗಿದ್ದ ವೇಳೆಯಲ್ಲಿ ತಂದೆ ಚನ್ನಪ್ಪ ಆತನ ತಲೆಯ ಮೇಲೆ ಕಲ್ಲುಎತ್ತಿ ಹಾಕಿದ್ದಾನೆ. ಅಷ್ಟೇ ಅಲ್ಲದೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚನ್ನಪ್ಪ ಅಂಜುರೆಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+