ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ; ಬೆಳಗಾವಿ ಮೂಲದ ಶಿಕ್ಷಕನ ಬಂಧನ
ಬೆಳಗಾವಿ, ಫೆಬ್ರವರಿ 12: ಪ್ರಥಮ ದರ್ಜೆ ಸಹಾಯಕರ ನೇಮಕಾತಿಗಾಗಿ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಬೆಳಗಾವಿಯಲ್ಲಿ ದೈಹಿಕ ಶಿಕ್ಷಕರೊಬ್ಬರನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವೆಂಕಟೇಶ್ ಬಂಧಿತ ಆರೋಪಿ. ಕೊರಟಗೆರೆ ತಾಲೂಕಿನ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ದೈಹಿಕ ಶಿಕ್ಷಕರಾಗಿ ವೆಂಕಟೇಶ್ ಕೆಲಸ ಮಾಡುತ್ತಿದ್ದರು.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪ ನೀಡಿದ ಮಾಹಿತಿ ಅನ್ವಯ ವೆಂಕಟೇಶ್ ಬಂಧಿಸಲಾಗಿದೆ. ಸರ್ಕಾರಿ ನೌಕರಿ ಪಡೆಯಬೇಕು ಎಂದು ಕನಸು ಕಾಣುತ್ತಿದ್ದ ವೆಂಕಟೇಶ್ ಪರೀಕ್ಷೆಗಾಗಿ ತಯಾರಿ ಮಾಡಿಕೊಳ್ಳುತ್ತಿದ್ದ.

ಆರೋಪಿ ರಾಚಪ್ಪನಿಗೆ ವೆಂಕಟೇಶ್ ದೊಡ್ಡಪ್ಪನ ಮಗ. ಪರೀಕ್ಷೆ ದಿನಾಂಕ ಘೋಷಣೆಗೂ ಮೊದಲೇ ಕರೆ ಮಾಡಿದ್ದ ರಾಚಪ್ಪ ನನಗೆ ಪ್ರಶ್ನೆ ಪತ್ರಿಕೆ ಸಿಗಲಿದೆ. ಅದನ್ನು ನಿನಗೆ ಕೊಡುವೆ ಅಭ್ಯರ್ಥಿಗಳನ್ನು ಒಟ್ಟುಗೂಡಿಸು, ಪ್ರತಿಯೊಬ್ಬರಿಂದ 10 ಲಕ್ಷ ಹಣ ಸಂಗ್ರಹ ಮಾಡು ಎಂದು ಹೇಳಿದ್ದ.
ರಾಚಪ್ಪ ಮಾತನ್ನು ನಂಬಿದ್ದ ವೆಂಕಟೇಶ್ ಸ್ಥಳೀಯ ಅಭ್ಯರ್ಥಿಗಳನ್ನು ಸೇರಿಸಿ ಪ್ರಶ್ನೆ ಪತ್ರಿಕೆಗಾಗಿ ಕಾಯುತ್ತಿದ್ದ. ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಕೆಲವು ಆರೋಪಿಗಳ ಬಂಧನವಾಗುತ್ತಿದ್ದಂತೆ ವೆಂಕಟೇಶ್ ತಲೆಮರೆಸಿಕೊಂಡಿದ್ದ.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜನವರು 24ರಂದು ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಫೆಬ್ರವರಿ 28ರಂದು ಪರೀಕ್ಷೆ ನಡೆಸುವುದಾಗಿ ಕರ್ನಾಟಕ ಲೋಕಸೇವಾ ಆಯೋಗ ಈಗಾಗಲೇ ಘೋಷಣೆ ಮಾಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications