ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕ ಬಂದ್ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಹೂ ವಿತರಣೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಉತ್ತರ ಕರ್ನಾಟಕ ಬಂದ್ ವಿರೋಧಿಸಿ ಇವ್ರು ಏನ್ ಮಾಡಿದ್ರು ನೋಡಿ | Oneindia Kannada

ಬೆಳಗಾವಿ, ಆಗಸ್ಟ್.02: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಗೆ ಬಹುಪಾಲು ಸಂಘಟನೆಗಳು ಬೆಂಬಲ ನೀಡಿಲ್ಲ. ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳು ಬಂದ್ ವಿರೋಧಿಸಿ ಹೋರಾಟ ನಡೆಸಿದ್ದು, ಬಂದ್ ಮಾಡದಂತೆ ಜನರಲ್ಲಿ, ವ್ಯಾಪಾರಸ್ಥರಲ್ಲಿ ಮನವಿ ಮಾಡುತ್ತಿವೆ.

ಬೆಳಗಾವಿ ನಗರ ಸೇರಿ ಜಿಲ್ಲೆಯಾದ್ಯಂತ ಬಂದ್ ಬಿಸಿಯಿಲ್ಲ. ಎಂದಿನಂತೆ ಸರ್ಕಾರಿ ಬಸ್ ಸೇವೆ, ಆಟೋ ಮತ್ತು ಖಾಸಗಿ ವಾಹನ ಸಂಚಾರ ಸಾಮಾನ್ಯವಾಗಿವೆ. ಹೋಟೆಲ್, ಅಂಗಡಿ ಮುಗ್ಗಟ್ಟುಗಳು ಸಹ ತೆರೆದಿವೆ.

ಪ್ರತ್ಯೇಕ ರಾಜ್ಯಕ್ಕಾಗಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆಪ್ರತ್ಯೇಕ ರಾಜ್ಯಕ್ಕಾಗಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತ ಬಾಬು ಸಂಗೋಡಿ ಹಾಗೂ ಕರವೇ ಮುಖಂಡ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಬಂದ್ ಇಲ್ಲ ಅಂತ ಹೂ ನೀಡುವುದರ ಮೂಲಕ ಬಂದ್ ಗೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ.

Flower was distributed by Kannada organizations in belgaum

ಪ್ರಯಾಣಿಕರಿಗೆ, ಅಂಗಡಿ ಮಾಲೀಕರಿಗೆ ಹಾಗೂ ಆಟೋ ಚಾಲಕರು ಸೇರಿದಂತೆ ಬಸ್ ನಿಲ್ದಾಣದಲ್ಲಿ ಸೇರಿದ ಜನರಿಗೆ ಹೂ ವಿತರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬಂದ್ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

LIVE: ಉತ್ತರ ಕರ್ನಾಟಕ ಬಂದ್ ಕರೆ ವಾಪಸ್, ಸಾಂಕೇತಿಕ ಪ್ರತಿಭಟನೆ LIVE: ಉತ್ತರ ಕರ್ನಾಟಕ ಬಂದ್ ಕರೆ ವಾಪಸ್, ಸಾಂಕೇತಿಕ ಪ್ರತಿಭಟನೆ

ಆದರೆ ಉತ್ತರ ಕರ್ನಾಟಕ ರೈತ ಸಂಘದಿಂದ ಮಾತ್ರ ಬಂದ್ ಆಚರಿಸುತ್ತಿದ್ದು, ಬೆಳಗಾವಿ, ರಾಮದುರ್ಗ, ಸವದತ್ತಿ ಸೇರಿ ವಿವಿಧ ತಾಲೂಕಿನಲ್ಲಿ ಬೀದಿ ಹೋರಾಟ ನಡೆಸಲಿವೆ. ಸಂಘವು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರಾಲಿ ನಡೆಸಲು ನಿರ್ಧರಿಸಿರುವುದು ತಿಳಿದು ಬಂದಿದೆ.

ಬಂದ್ ಹಿನ್ನೆಲೆ ಬಿಗಿ ಪೋಲಿಸ್ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.

English summary
Most of the organizations have not supported North Karnataka's separate state bandh. Flower was distributed by Kannada organizations, opposing North Karnataka Bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X