ಬೆಳಗಾವಿ: ಮತದಾನ ನೋಡಲು ಬಂದ 5 ದೇಶಗಳ ಅಧಿಕಾರಿಗಳು
ಬೆಳಗಾವಿ, ಮೇ 7: ದೇಶದಲ್ಲಿ 3ನೇ ಹಂತ ಮತ್ತು ಕರ್ನಾಟಕದ 2ನೇ ಹಂತದ ಲೋಕಸಭಾ ಚುನಾವಣೆ ಮತದಾನ ಮಂಗಳವಾರ ನಡೆಯುತ್ತಿದೆ. ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಮಂಗಳವಾರ ಮತದಾನ ನಡೆಯುತ್ತಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗಾವಿ ಸಹ ಒಂದು. ರಾಜ್ಯದಲ್ಲಿಯೇ ಅತಿ ಹೆಚ್ಚು ವಿಧಾನಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಬೆಳಗಾವಿ, ಚಿಕ್ಕೋಡಿ ಎಂದು ಎರಡು ಲೋಕಸಭಾ ಕ್ಷೇತ್ರಗಳಾಗಿ ವಿಂಗಡಿಸಲಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮತದಾನದ ಪ್ರಕ್ರಿಯೆಯನ್ನು ವೀಕ್ಷಣೆ ಮಾಡಲು 5 ರಾಷ್ಟ್ರಗಳ ಚುನಾವಣಾ ಆಯೋಗದ ಅಂತರ್ ರಾಷ್ಟ್ರೀಯ ನಿಯೋಗದ ಸದಸ್ಯರು ಆಗಮಿಸಿದ್ದಾರೆ. ಮಂಗಳವಾರ ಅವರು ಬೆಳಗಾವಿ ನಗರದ ವಿವಿಧ ಮತಗಟ್ಟೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು. ಮತಗಟ್ಟೆಯ ಒಳಗೆ ತೆರಳಿ ಅಧಿಕಾರಿಗಳ ಜೊತೆ ಪ್ರಕ್ರಿಯೆಗಳ ಕುರಿತು ಮಾಹಿತಿ ಸಂಗ್ರಹಣೆಯನ್ನು ಮಾಡಿದರು.
ಜಿಲ್ಲಾಡಳಿತ ಮಾಹಿತಿ ನೀಡಿತ್ತು: ಭಾರತ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಆದ್ದರಿಂದ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಣೆಗಾಗಿ ಒಟ್ಟು 16 ದೇಶಗಳ ಪ್ರತಿನಿಧಿಗಳು ಈಗಾಗಲೇ ಭಾರತಕ್ಕೆ ಬಂದಿದ್ದಾರೆ. ಇವರಲ್ಲಿ 5 ದೇಶಗಳ ಚುನಾವಣಾ ಆಯೋಗಗಳ 10 ಮುಖ್ಯಸ್ಥರು/ ಸದಸ್ಯರರು/ ಅಧಿಕಾರಿಗಳ ಅಂತರ್ ರಾಷ್ಟ್ರೀಯ ನಿಯೋಗ ಬೆಳಗಾವಿ ಜಿಲ್ಲೆಗೆ ಆಗಮಿಸಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿತ್ತು.
ಬೆಳಗಾವಿ ಜಿಲ್ಲೆಯಲ್ಲಿ 2055870 ಪುರುಷ ಮತದಾರರು, 2049169 ಮಹಿಳಾ ಮತದಾರರು ಹಾಗೂ 186 ಇತರೆ ಮತದಾರರು ಸೇರಿದಂತೆ ಒಟ್ಟು 4105225 ಮತದಾರರಿದ್ದಾರೆ. ಮತದಾನ ಮಾಡಲು ಬರುವ ಜನರಿಗಾಗಿಯೇ ಅಗತ್ಯ ಮೂಲಸೌಕರ್ಯದ ವ್ಯವಸ್ಥೆ ಮಾಡಲಾಗಿದೆ. ಮತದಾನ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಎಂದು ನಿಯೋಗ ಪರಿಶೀಲನೆಯನ್ನು ನಡೆಸುತ್ತಿದೆ.
ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ವಿವಿಧ ದೇಶಗಳ ಚುನಾವಣಾ ಆಯೋಗದ ಅಧಿಕಾರಿ, ಸಿಬ್ಬಂದಿಗಳ ತಂಡ ಭಾರತಕ್ಕೆ ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಲು ಆಗಮಿಸಿದೆ. ದೇಶದಲ್ಲಿ ಒಟ್ಟು 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮಂಗಳವಾರ ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದೆ.
ಭೂತಾನ್, ಮಂಗೋಲಿಯಾ, ಆಸ್ಟ್ರೇಲಿಯಾ, ಮಡಗಾಸ್ಕರ್, ಫಿಜಿ, ರಷ್ಯಾ, ಮಾಲ್ಡೋವಾ, ಕಾಂಬೋಡಿಯಾ, ನೇಪಾಳ, ಫಿಲಿಫೈನ್ಸ್, ಶ್ರೀಲಂಕಾ, ಜಿಂಬಾಬ್ವೆ, ಬಾಂಗ್ಲಾದೇಶ, ಕಝಕಿಸ್ತಾನ, ನಮೀಬಿಯಾ ಸೇರಿದಂತೆ ವಿವಿಧ ದೇಶದ ಪ್ರತಿನಿಧಿಗಳು ಭಾರತಕ್ಕೆ ಚುನಾವಣೆ ವೀಕ್ಷಿಸಲು ಆಗಮಿಸಿದ್ದಾರೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications