ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ: ಸಿದ್ದರಾಮಯ್ಯ ತಿರುಗೇಟು
ಬೆಳಗಾವಿ, ಡಿಸೆಂಬರ್ 5: ಕಾಂಗ್ರೆಸ್ ಪಕ್ಷದಿಂದ ಸರ್ವನಾಶ ಆದೆ ಎಂಬ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನೀಡಿದ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ""ಕುಮಾರಸ್ವಾಮಿಗೆ ಗುಡ್ ವಿಲ್ ಇದ್ದರೆ ತಾನೇ ಹಾಳಾಗೋಕೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಅವರ ಮಾತಿನಲ್ಲಿ ಯಾವುದೇ ಸತ್ಯ ಇಲ್ಲ. ಇವರನ್ನು ಸಿಎಂ ಮಾಡಿದ್ದೇ ತಪ್ಪು ಆಯ್ತಾ? ಇವರಿಗೆ ಸೀಟು ಕಮ್ಮಿ ಇದ್ದರೂ ಇವರನ್ನೇ ಸಿಎಂ ಮಾಡಿದ್ದೇವೆ. ಕಾಂಗ್ರೆಸ್ ಸೀಟು ಹೆಚ್ಚಿಗೆ ಇದ್ದರೂ ಇವರನ್ನು ಮುಖ್ಯಮಂತ್ರಿ ಮಾಡಿದೆವು ಎಂದರು.

ನಮ್ಮ ನಿರ್ಧಾರದಿಂದ ಅವರಿಗೆ ಉಪಯೋಗ ಆಗಿತ್ತು. ಎಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದೇ ತಪ್ಪಾಯ್ತಾ? ಎಂದು ಪ್ರಶ್ನಿಸಿದರು.
ಯಾವಾಗಲೂ ಕಣ್ಣೀರು ಹಾಕುವುದು ಕುಮಾರಸ್ವಾಮಿ ಅವರ ಸಂಸ್ಕೃತಿ. ಕಣ್ಣೀರು ಹಾಕುವುದು ದೇವೇಗೌಡರ ಸಂಸ್ಕೃತಿ. ಇವರು ಒಳ್ಳೆಯದಕ್ಕೂ ಹಾಕ್ತಾರೆ, ಕೆಟ್ಟದಕ್ಕೂ ಹಾಕ್ತಾರೆ. ಓಲೈಕೆಗೂ ಕಣ್ಣೀರು ಹಾಕ್ತಾರೆ. ಆ ಕಣ್ಣೀರಿಗೆ ಬೆಲೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ತಿರಗೇಟು ನೀಡಿದರು.
ಎಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆಡಳಿತ ನಡೆಸಿದ್ದು ಎಲ್ಲಿಂದ ಗೊತ್ತಾ? ವೆಸ್ಟೆಂಡ್ ಹೋಟೆಲ್ ನಿಂದ ಆಡಳಿತ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡಿದ್ದೇವೆ ಅಂತಾ ಹೇಳಿದ್ದಾರಲ್ಲ, ಅವರ ಮನೆಯಿಂದ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ನಾವು ಅವರನ್ನು ಸಿಎಂ ಮಾಡಿದ್ದರಿಂದ ಅನುದಾನ ಕೊಟ್ಟಿದ್ದಾರೆ ಅಷ್ಟೇ. ಅದೇನು ದೊಡ್ಡಸ್ತಿಕೆಗೆ ಹೇಳ್ತಾರೆ, ನಮ್ಮ ಶಾಸಕರು ಸಪೋರ್ಟ್ ಮಾಡಿದ್ದರಿಂದ ಸಿಎಂ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications