ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ
ಬೆಳಗಾವಿ, ಡಿಸೆಂಬರ್ 17: ರಾಜ್ಯದಿಂದ ಗೋವಾಕ್ಕೆ ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಮೀನು ಸಾಗಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸೋಮವಾರ ಇಲ್ಲಿ ಹೇಳಿದ್ದಾರೆ.
ಗೋವಾ ಸರಕಾರವು ಇತ್ತೀಚೆಗೆ ಫಾರ್ಮಾಲಿನ್ ಅಂಶ ಹೆಚ್ಚಾಗಿರುತ್ತದೆ ಎನ್ನುವ ಕಾರಣ ಮುಂದೊಡ್ಡಿ ಅನ್ಯ ರಾಜ್ಯಗಳಿಂದ ತನ್ನಲ್ಲಿಗೆ ನಡೆಯುತ್ತಿರುವ ಮೀನು ಸಾಗಣೆಗೆ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರಿಂದಾಗಿ ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಮೀನು ವ್ಯಾಪಾರಿಗಳಿಗೆ ಅನನುಕೂಲವಾಗಿತ್ತು.

ಈ ಬಗ್ಗೆ ಗೋವಾದ ಸೋಮವಾರ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರೊಂದಿಗೆ ಮಾತುಕತೆ ನಡೆಸಿದ ದೇಶಪಾಂಡೆಯವರು, 'ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆ ಮಾಡಲು ಯಾವುದೇ ಅಡೆತಡೆ ಇರುವುದಿಲ್ಲ. ಆದರೆ ಟ್ರಕ್ ಸೇರಿದಂತೆ ಭಾರೀ ವಾಹನಗಳಲ್ಲಿ ಆ ರಾಜ್ಯಕ್ಕೆ ಮೀನು ಸಾಗಣೆ ಮಾಡಬೇಕಾದರೆ ಅನುಮತಿ/ಪ್ರಮಾಣ ಪತ್ರ ಕಡ್ಡಾಯವಾಗಿದೆ,'' ಎಂದು ತಿಳಿಸಿದ್ದಾರೆ.
ಗೋವಾ ಸರಕಾರವು ಇತ್ತೀಚೆಗೆ 60 ಕಿ.ಮೀ. ಸುತ್ತಳತೆ ಪ್ರದೇಶದಿಂದ ತನ್ನಲ್ಲಿಗೆ ಮೀನು ಸಾಗಣೆ ಮುಕ್ತ ಅವಕಾಶ ನೀಡಿತ್ತು. ಇಂದಿನ ಮಾತುಕತೆಯಿಂದ ಸಣ್ಣ ಮತ್ತು ಮಧ್ಯಮ ಸ್ವರೂಪದ ಮೀನು ವ್ಯಾಪಾರೋದ್ಯಮಿಗಳಿಗೆ ಅನುಕೂಲವಾಗಿದೆ. ರಾಣೆ ಅವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ, ಎಂದು ಸಚಿವರು ಹೇಳಿದ್ದಾರೆ.
ಈ ಸಮಸ್ಯೆ ಆರಂಭವಾದ ಕೂಡಲೇ ದೇಶಪಾಂಡೆಯವರು ಗೋವಾ ಸರಕಾರದೊಂದಿಗೆ ಮಾತುಕತೆಯನ್ನು ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications