ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು

|
Google Oneindia Kannada News

ಬೆಂಗಳೂರು, ಆಗಸ್ಟ್ 27 : ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು-ಬೆಳಗಾವಿ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.

ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

 ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ

ರೈಲು ನಂಬರ್ 06581 ಮತ್ತು 06582 ಬೆಂಗಳೂರು-ಬೆಳಗಾವಿ ನಡುವೆ ಸಂಚಾರ ನಡೆಸಲಿವೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಈ ವಿಶೇಷ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಬೆಳಗಾವಿಯಿಂದ ಹೊರಡುವ ರೈಲು ಯಶವಂತಪುರದ ತನಕ ಬರಲಿದೆ.

Ganesh Chaturthi Special Train Between Bengauru Belagavi

ಆಗಸ್ಟ್ 30ರ ಶುಕ್ರವಾರ ಯಶವಂತಪುರದಿಂದ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಸೆಪ್ಟೆಂಬರ್ 2ರ ಸೋಮವಾರ ರೈಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಲಿದೆ.

ನಿಲ್ದಾಣಗಳು : ಯಶವಂತಪುರದಿಂದ ಹೊರಡುವ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ದಕ್ಷಿಣ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ನಿಲ್ದಾಣದಲ್ಲಿ ನಿಲುಗಡೆಗೊಂಡು ಬೆಳಗಾವಿಗೆ ತಲುಪಲಿದೆ.

ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂ

ಬೆಂಗಳೂರು-ಬೆಳಗಾವಿ ನಡುವೆ ಪ್ರತಿದಿನ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸುತ್ತಿದೆ. ಜೂನ್ 29ರಂದು ಆರಂಭವಾದ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನವೆಂಬರ್ 1ರಿಂದ ಈ ರೈಲು ಖಾಯಂ ಆಗಿ ಸಂಚಾರ ನಡೆಸಲಿದೆ.

ಈ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ 15 ಕೋಚ್‌ಗಳಿದ್ದು, 868 ಸೀಟುಗಳಿವೆ. ಬೆಂಗಳೂರು-ಬೆಳಗಾವಿ ನಡುವಿನ ಸುಮಾರು 610 ಕಿ.ಮೀ. ಮಾರ್ಗವನ್ನು ರೈಲು 10 ಗಂಟೆಗಳಲ್ಲಿ ಕ್ರಮಿಸಲಿದೆ. ಆದ್ದರಿಂದ, ಜನರ ಮೆಚ್ಚುಗೆಗೆ ಪಾತ್ರವಾಗಿದೆ.

English summary
Special train arranged between Bengauru and Belagavi to beatGanesh Chaturthi rush. Train will run on August 30 and September 2, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X