ಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು
ಬೆಂಗಳೂರು, ಆಗಸ್ಟ್ 27 : ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು-ಬೆಳಗಾವಿ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.
ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ
ರೈಲು ನಂಬರ್ 06581 ಮತ್ತು 06582 ಬೆಂಗಳೂರು-ಬೆಳಗಾವಿ ನಡುವೆ ಸಂಚಾರ ನಡೆಸಲಿವೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಈ ವಿಶೇಷ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಬೆಳಗಾವಿಯಿಂದ ಹೊರಡುವ ರೈಲು ಯಶವಂತಪುರದ ತನಕ ಬರಲಿದೆ.
ಆಗಸ್ಟ್ 30ರ ಶುಕ್ರವಾರ ಯಶವಂತಪುರದಿಂದ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಸೆಪ್ಟೆಂಬರ್ 2ರ ಸೋಮವಾರ ರೈಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಲಿದೆ.
ನಿಲ್ದಾಣಗಳು : ಯಶವಂತಪುರದಿಂದ ಹೊರಡುವ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ದಕ್ಷಿಣ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ನಿಲ್ದಾಣದಲ್ಲಿ ನಿಲುಗಡೆಗೊಂಡು ಬೆಳಗಾವಿಗೆ ತಲುಪಲಿದೆ.
ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂ
ಬೆಂಗಳೂರು-ಬೆಳಗಾವಿ ನಡುವೆ ಪ್ರತಿದಿನ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸುತ್ತಿದೆ. ಜೂನ್ 29ರಂದು ಆರಂಭವಾದ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನವೆಂಬರ್ 1ರಿಂದ ಈ ರೈಲು ಖಾಯಂ ಆಗಿ ಸಂಚಾರ ನಡೆಸಲಿದೆ.
ಈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ 15 ಕೋಚ್ಗಳಿದ್ದು, 868 ಸೀಟುಗಳಿವೆ. ಬೆಂಗಳೂರು-ಬೆಳಗಾವಿ ನಡುವಿನ ಸುಮಾರು 610 ಕಿ.ಮೀ. ಮಾರ್ಗವನ್ನು ರೈಲು 10 ಗಂಟೆಗಳಲ್ಲಿ ಕ್ರಮಿಸಲಿದೆ. ಆದ್ದರಿಂದ, ಜನರ ಮೆಚ್ಚುಗೆಗೆ ಪಾತ್ರವಾಗಿದೆ.