ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ
ಬೆಳಗಾವಿ, ಆಗಸ್ಟ್ 26: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಳೆದ ವರ್ಷದ ಪ್ರವಾಹ ಪರಿಹಾರ ಇನ್ನೂ ಬಾಕಿ ಇರುವಾಗಲೇ ಈ ಬಾರಿ ಪುನಃ ಪ್ರವಾಹ ಅಪ್ಪಳಿಸಿದೆ. ಹಾಗಾಗಿ ಬಾಕಿಯ ಜೊತೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದಾರೆ.
ಮಂಗಳವಾರ ಪ್ರವಾಹದ ವೈಮಾನಿಕ ಸಮೀಕ್ಷೆಗೆಂದು ಬೆಳಗಾವಿಗೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಕುರಿತು ಮನವಿ ಸಲ್ಲಿಸಿದರು.
ಪ್ರಸ್ತುತ ಆಗಷ್ಟ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದ್ದು, ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರವೂ ಹೊರತಾಗಿಲ್ಲ. ಹಿಂದಿನ ವರ್ಷದ ಅತಿವೃಷ್ಠಿಯಿಂದ ಸರಿಯಾದ ರೀತಿಯಲ್ಲಿ ಪರಿಹಾರ ಸಿಗದೇ ಕಂಗಾಲಾದ ಗ್ರಾಮಸ್ಥರು, ಇನ್ನೂ ಸುಧಾರಿಸುತ್ತಿರುವಾಗಲೇ ಈ ವರ್ಷವೂ ಅತೀ ಮಳೆ ಸುರಿಯುತ್ತಿದೆ ಎಂದು ತಿಳಿಸಿದರು.

ಮಳೆಹಾನಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು
ಬೆಳಗಾವಿ ಗ್ರಾಮೀಣ ಕ್ಷೇತ್ರವು ಹೆಚ್ಚಾಗಿ ಕೃಷಿ ಆಧಾರಿತವಾಗಿದ್ದು, ರೈತರು ಬೆಳೆದ ಬೆಳೆಯು ಸಂಪೂರ್ಣ ಹಾಳಾಗಿದೆ. ಮಳೆ ನೀರಿನಿಂದ ಸಂಪೂರ್ಣ ಆವೃತವಾಗಿ ಯಾವುದೇ ಬೆಳೆಯನ್ನು ಬೆಳೆಯಲಾರದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೇ ಗ್ರಾಮದಲ್ಲಿರುವ ಸಣ್ಣ ಕೆರೆ, ಅಣೆಕಟ್ಟು, ರಸ್ತೆಗಳು ಸಹ ಹಾಳಾಗಿವೆ. ರಸ್ತೆಗಳು ಮಳೆಯಿಂದ ಹಾಳಾಗಿದ್ದು, ಸಂಚಾರ ವ್ಯವಸ್ಥೆಗೆ ಅಡೆತಡೆಯಾಗಿದೆ. ಹಾಗಾಗಿ ಕ್ಷೇತ್ರದಲ್ಲಿ ಉಂಟಾಗಿರುವ ಹಾನಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಹೆಬ್ಬಾಳ್ಕರ್ ಕೋರಿದರು.

1000 ಸಂತ್ರಸ್ಥರಿಗೆ ಪರಿಹಾರ ನೀಡಲಾಗಿದೆ
2019 -20ನೇ ಸಾಲಿನಲ್ಲಿ ಸುರಿದ ಅತೀವ ಮಳೆಗೆ ಗ್ರಾಮೀಣ ಕ್ಷೇತ್ರದ ಸುಮಾರು 5 ಸಾವಿರಕ್ಕಿಂತಲೂ ಹೆಚ್ಚಿನ ಮನೆಗಳು ಕುಸಿದಿದ್ದು, ಅದರಲ್ಲಿ ಸುಮಾರು 1000 ಸಂತ್ರಸ್ಥರಿಗೆ ಪರಿಹಾರ ನೀಡಲಾಗಿದೆ. ಹೆಚ್ಚುವರಿ 1 ಸಾವಿರಕ್ಕಿಂತಲೂ ಹೆಚ್ಚಿನ ಸಂತ್ರಸ್ಥರಿಗೆ ಪರಿಹಾರ ಒದಗಿಸುವಂತೆ ಸಲ್ಲಿಸಿದ ಮನವಿಗೆ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಗ್ರಾಮೀಣ ಕ್ಷೇತ್ರದ ಒಟ್ಟಾರೆ 6 ಸಾವಿರಕ್ಕಿಂತಲೂ ಹೆಚ್ಚಿನ ಸಂತ್ರಸ್ಥರಿಗೆ ಪರಿಹಾರ ದೊರಕಬೇಕಿದೆ ಎಂದು ಮಾಹಿತಿ ತಿಳಿಸಿದರು.

ಫಲವತ್ತಾದ ಮಣ್ಣು ಹಾನಿಯಾಗಿದೆ
ಭೇಂಡಿಗೇರಿ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಇಂಗು ಕೆರೆಯು ಆಗಸ್ಟ್ 6 ಮತ್ತು 7ರಂದು ಸುರಿದ ಭಾರಿ ಮಳೆಗೆ ಸುಮಾರು 10 ಮೀಟರ್ ಕುಸಿದಿದೆ. ಇದರಿಂದ ಯಾವುದೇ ತರಹದ ಜೀವ ಹಾನಿಯಾಗದಿರುವುದು ಸಮಾಧಾನದ ಸಂಗತಿಯಾದರೂ ತಳಭಾಗ ಜಮೀನಿನಲ್ಲಿರುವ ಫಲವತ್ತಾದ ಮಣ್ಣು ಹಾಗೂ ಸುಮಾರು 20 ಎಕರೆಯಷ್ಟು ಬೆಳೆಗಳು ಹಾನಿಯಾಗಿರುತ್ತವೆ ಎಂದು ಸಿಎಂ ಅವರಿಗೆ ಮನವರಿಕೆ ಮಾಡಿದರು.

ಆಗಸ್ಟ್ ಮಾಹೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
ಕೆರೆಯ ಏರಿಯನ್ನು ಮರು ನಿರ್ಮಾಣ ಮಾಡಲು ಅಂದಾಜು 40 ಲಕ್ಷ ರೂ.ಗಳ ಅವಶ್ಯಕತೆ ಇದೆಯೆಂದು ಇಲಾಖೆಯವರು ವರದಿ ಮಾಡಿದ್ದಾರೆ. ಆದ್ದರಿಂದ ಶೀಘ್ರ ಇಲಾಖೆಗೆ ಅನುದಾನ ಮಂಜೂರು ಮಾಡಬೇಕು. ಈ ವರ್ಷದ ಆಗಸ್ಟ್ ಮಾಹೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದ್ದು, ಗ್ರಾಮೀಣ ಕ್ಷೇತ್ರವನ್ನು ಸಂಕಷ್ಟಕ್ಕೀಡುಮಾಡಿದೆ. ಬಾಕಿ ಇರುವ ಸಂತ್ರಸ್ಥರಿಗೆ ಶೀಘ್ರ ಪರಿಹಾರವನ್ನು ಒದಗಿಸಬೇಕು ಎಂದು ಶಾಸಕಿ ಮನವಿ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications