ಗೋವಾ: ರೈಲು ಪ್ರಯಾಣದ ವೇಳೆ ವಿಷಾಹಾರ ಸೇವನೆ ಮಾಡಿ 8 ಯುವಕರು ಅಸ್ವಸ್ಥ
ಬೆಳಗಾವಿ, ಸೆಪ್ಟೆಂಬರ್, 12: ರೈಲ್ವೆ ಪ್ರಯಾಣದ ವೇಳೆ ವಿಷಾಹಾರ ಸೇವನೆ ಮಾಡಿ 8 ಜನ ಯುವಕರು ಅಸ್ವಸ್ಥಗೊಂಡ ಘಟನೆ ನಿನ್ನೆ (ಸೆಪ್ಟೆಂಬರ್ 12) ತಡರಾತ್ರಿ ಗೋವಾದಲ್ಲಿ ನಡೆದಿದೆ.
ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ 8 ಜನ ಯುವಕರು ಹಸಿವು ತಾಳಲಾರದೇ ಗೋವಾದಲ್ಲಿ ಊಟ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದಾರೆ. ನಂತರ ರೈಲು ಬೆಳಗಾವಿಗೆ ಬರುತ್ತಿದ್ದಂತೆ ಸಹ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲ 8 ಯುವಕರನ್ನು ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆರು ಜನ ಯುವಕರು ಪ್ರಜ್ಞಾಹೀನ ಸ್ಥತಿಗೆ ಬಂದಿದ್ದು, ಇಬ್ಬರು ಯುವಕರು ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗೆ ವಿಷಾಹಾರ ಸೇವಿಸಿದ ಎಲ್ಲರೂ ಉತ್ತರ ಪ್ರದೇಶದ ಜಾನ್ಸಿ ಮೂಲದವರು ಎಂದು ಗುರುತಿಸಲಾಗಿದೆ. ಈ ಯುವಕರು ಉದ್ಯೋಗ ಅರಿಸಿ ಉತ್ತರ ಪ್ರದೇಶದಿಂದ ಗೋವಾಕ್ಕೆ ಬಂದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಲಸ ಮುಗಿವ ಬಳಿಕ ಮರಳಿ ವಾಸ್ಕೋ- ನಿಜಾಮುದ್ದೀನ್ ರೈಲಿನಲ್ಲಿ ಗೋವಾದಿಂದ ತಮ್ಮ ರಾಜ್ಯ ಉತ್ತರ ಪ್ರದೇಶಕ್ಕೆ ಮರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ವಿಷಾಹಾರ ಸೇವಿಸಿದ್ದರಿಂದ ದುರ್ಘಟನೆ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಇನ್ನು ಜಿಲ್ಲಾಸ್ಪತ್ರೆಗೆ ನಗರ ಹಿರಿಯ ಪೊಲೀಸ್ ಅಧಿಕಾರಿಗಳು, ರೈಲ್ವೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications