ಬೆಳಗಾವಿ ರಾಜಕೀಯ; ಬಂತೊಂದು Breaking News!
ಬೆಳಗಾವಿ, ಅಕ್ಟೋಬರ್ 19; ಕರ್ನಾಟಕದ ರಾಜಕೀಯವೇ ಬೇರೆ ಬೆಳಗಾವಿ ರಾಜಕೀಯವೇ ಬೇರೆ ಎಂಬ ಮಾತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಾಜಕೀಯದ ನಡುವೆ ಜೆಡಿಎಸ್ ಪಕ್ಷ ಅಷ್ಟು ಪ್ರಭಾವಿಯಾಗಿಲ್ಲ. ಜಿಲ್ಲೆಯ ಜೆಡಿಎಸ್ ನಾಯಕರೊಬ್ಬರು ಈಗ ಕಾಂಗ್ರೆಸ್ ಸೇರುವ ಸಿದ್ಧತೆ ಆರಂಭಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ ಅಶೋಕ ಪೂಜಾರಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಿಂಧಗಿ ಉಪ ಚುನಾವಣೆ ಚಿತ್ರಣ ಬದಲಿಸಿದ ಜೆಡಿಎಸ್!
ಬೆಳಗಾವಿ ಜಿಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ತವರು ಕ್ಷೇತ್ರ. ಶೀಘ್ರದಲ್ಲಿಯೇ ಅಶೋಕ ಪೂಜಾರಿ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಅಶೋಕ ಪೂಜಾರಿ ಪಕ್ಷ ತೊರೆದರೆ ಬೆಳಗಾವಿ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಲಿದೆ.
ವಿದ್ಯಾರ್ಥಿನಿ ಎದುರೂ ರಫೇಲ್ ಬಗ್ಗೆಯೇ ಸಮಾ ಭಾಷಣ ಮಾಡಿದ ರಾಹುಲ್
2023ರ ಚುನಾವಣೆಯಲ್ಲಿ ಗೋಕಾಕ್ನಿಂದ ಅಶೋಕ ಪೂಜಾರಿ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಬಳಿಕ ಮುಂದಿನ ರಾಜಕೀಯ ನಡೆಯ ಬಗ್ಗೆ ಮಾಹಿತಿ ತಿಳಿಯಲಿದೆ.
ಜೆಡಿಎಸ್ 30 ಸೀಟಿನ ಪಕ್ಷ ಎಂದವರಿಗೆ ಎಚ್ಡಿಕೆ ತಿರುಗೇಟು!
ಪ್ರಭಾವಿ ನಾಯಕ ಅಶೋಕ ಪೂಜಾರಿ
ಅಶೋಕ ಪೂಜಾರಿ ಗೋಕಾಕ್ ಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ. 2008, 2013ರಲ್ಲಿ ಜೆಡಿಎಸ್ನಿಂದ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ 75,969 ಮತಗಳನ್ನು ಪಡೆದು ಕಾಂಗ್ರೆಸ್ನ ರಮೇಶ್ ಜಾರಕಿಹೊಳಿ ವಿರುದ್ಧ ಸೋತಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದರು. ಆಗ ನಡೆದ ಗೋಕಾಕ್ ಉಪಚುನಾವಣೆಯಲ್ಲಿ ಅಶೋಕ ಪೂಜಾರಿ ಮತ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾದರು. ಉಪ ಚುನಾವಣೆಯಲ್ಲಿ ಸೋಲು ಕಂಡರು. ಈಗ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ
ಅಶೋಕ ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕಾಂಗ್ರೆಸ್ಗೆ ಅವರನ್ನು ಆಹ್ವಾನಿಸಲಾಗಿದ್ದು, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಶೀಘ್ರವೇ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ಅಶೋಕ ಪೂಜಾರಿಗೆ ಕ್ಷೇತ್ರದಲ್ಲಿ ಅವರದ್ದೇ ಆದ ಬೆಂಬಲಿಗರು, ಹಿತೈಷಿಗಳಿದ್ದಾರೆ. 2018ರ ಚುನಾವಣೆಯಲ್ಲಿ ಅವರು 75 ಸಾವಿರ ಮತಗಳನ್ನು ಪಡೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಸತೀಶ್ ಜಾರಕಿಹೊಳಿ ಭೇಟಿ
ದಿ. ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಶೋಕ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನಿಸಿದ್ದರು. ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದರು.
ಈಗ 2023ರ ವಿಧಾನಸಭೆ ಚುನಾವಣೆ ತಯಾರಿ ಆರಂಭವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ವಿವಿಧ ಪಕ್ಷಗಳಿಂದ ಸ್ಪರ್ಧಿಸಿರುವ ಅಶೋಕ ಪೂಜಾರಿ ಮಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಭ್ಯರ್ಥಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.
ಸರ್ವಾಧಿಕಾರದ ವಿರುದ್ಧ ಹೋರಾಟ
ಗೋಕಾಕ್ ಉಪ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದ ಅಶೋಕ ಪೂಜಾರಿ, "ಕ್ಷೇತ್ರದ ರಾಜಕೀಯದಲ್ಲಿ ಒಂದು ರೀತಿಯ ಭಯದ ವಾತಾವರಣ ಸೃಷ್ಟಿ ಮಾಡಲಾಗಿದೆ. ಯಾರ ಜೊತೆ ಗುರುತಿಸಿಕೊಂಡರೂ ಕಷ್ಟ ಎಂಬಂಥ ಪರಿಸ್ಥಿತಿ ಸೃಷ್ಟಿಸಲಾಗಿದೆ. ಕಳೆದ 11 ವರ್ಷಗಳಿಂದ ರಾಜಕೀಯ ಸರ್ವಾಧಿಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ನನಗೆ ಯಾರ ಭಯವೂ ಇಲ್ಲ" ಎಂದು ಹೇಳಿದ್ದರು.
2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ ಅದನ್ನು ತಿರಸ್ಕರಿಸಿದ ಪೂಜಾರಿ ಗೋಕಾಕ್ ಉಪ ಚುನಾವಣೆ ಸಂದರ್ಭದಲ್ಲಿ, "ಗೋಕಾಕ್ನಲ್ಲಿರುವ ಸರ್ವಾಧಿಕಾರಿ ರಾಜಕೀಯ ವ್ಯವಸ್ಥೆ ಬದಲಿಸುವ ಹೋರಾಟ ಮುಂದುವರೆಸುತ್ತೇನೆ" ಎಂದು ಹೇಳಿದ್ದರು. ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದರು.