ಬ್ರಾಹ್ಮಣೇತರರನ್ನು ಅರ್ಚಕರಾಗಿ ನೇಮಿಸಲು ಸರ್ಕಾರ ಚಿಂತನೆ
ಬೆಳಗಾವಿ, ನವೆಂಬರ್, 24: ಮುಜರಾಯಿ ಇಲಾಖೆ ಸುಪರ್ದಿಯಲ್ಲಿರುವ ದೇವಸ್ಥಾನಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರನ್ನು ಅರ್ಚಕರಾಗಿ ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತಂತೆ ಬುಧವಾರ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕ್ಷೇಮಾಭಿವೃದ್ಧಿ ಸಮಿತಿಯ ಆರನೇ ವಾರ್ಷಿಕ ವರದಿಯನ್ನು ಸದನಕ್ಕೆ ಸಲ್ಲಿಸಲಾಯಿತು.

ಪ್ರಮುಖ ದೇವಸ್ಥಾನಗಳಲ್ಲಿ ಬ್ರಾಹ್ಮಣೇತರರನ್ನೂ ಸಹ ಅರ್ಚಕ ವೃತ್ತಿಗೆ ನೇಮಿಸಿಕೊಳ್ಳಬೇಕು ಮತ್ತು ಮೇಲ್ಜಾತಿಯವರು ಮಾತ್ರ ಅರ್ಚಕರಾಗಿ ಮುಂದುವರಿಯುವುದು ಅಸಾಂವಿಧಾನಿಕ ಎಂದು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಎಲ್ಲ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ಕಲ್ಪಿಸುವುದಕ್ಕಾಗಿ ಶಾಸಕ ಕೆ.ಶಿವಮೂರ್ತಿ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚನೆ ಮಾಡಿತ್ತು.
ದೇವಸ್ಥಾನಗಳಲ್ಲಿ ಬ್ರಾಹ್ಮಣತೇರರನ್ನು ಅರ್ಚಕರಾಗಿ ನೇಮಿಸದೇ ಇರುವುದು ಸಂವಿಧಾನದ ಕಲಂ 14ರ ಉಲ್ಲಂಘಿಸಿದಂತೆ ಎಂದು ಈ ಸಮಿತಿ ವರದಿಯಲ್ಲಿ ತಿಳಿಸಿದೆ.
ಅಷ್ಟೇ ಅಲ್ಲದೆ ಸಂವಿಧಾನದ ಪರಿಚ್ಛೇದ 15 ರ ಪ್ರಕಾರ ಧರ್ಮ, ಜನಾಂಗ, ಜಾತಿ, ಲಿಂಗ ಅಸಮಾನತೆಯನ್ನು ತೋರುವಂತಿಲ್ಲ, ಮತ್ತು ಪರಿಚ್ಛೇಧ 16 ರ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ರಾಜ್ಯದಾದ್ಯಂತ ಸುಮಾರು 35 ಸಾವಿರ ದೇವಸ್ಥಾನಗಳ ನಿರ್ವಹಣೆಯನ್ನು ಮುಜರಾಯಿ ಇಲಾಖೆ ಹೊತ್ತುಕೊಂಡಿದೆ.
2006ರಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವೂ ಸಹ ದೇವಸ್ಥಾನಗಳಲ್ಲಿ ಎಲ್ಲಾ ಹಿಂದೂಗಳು ಅರ್ಚಕರಾಗಿ ಸೇವೆ ಸಲ್ಲಿಸಬಹುದು ಎಂದು ಆದೇಶ ಹೊರಡಿಸಿತ್ತು.
ದೇವಸ್ಥಾನಗಳಲ್ಲಿ ಅರ್ಚಕರನ್ನು ನೇಮಿಸಲು ಯಾವುದೇ ರೀತಿಯಲ್ಲೂ ಜಾತಿ ತಾರತಮ್ಯ ಧೋರಣೆ ಅನುಸರಿಸಬಾರದು ಎಂದು 2015ರಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications