ಸರ್ಕಾರ ನೀಡಿದ್ದ ಪ್ರವಾಹ ಪರಿಹಾರದ ಚೆಕ್ಗಳು ಬೌನ್ಸ್
ಬೆಳಗಾವಿ, ಜನವರಿ 31: ಪ್ರವಾಹ ಬಂದು ಬಡವರ ಮುಳುಗಿದ್ದ ಬದುಕಿಗೆ ಹುಲ್ಲು ಕಡ್ಡಿಯ ಆಸರೆಯಂತಗಿದ್ದ ಸರ್ಕಾರ ನೀಡಿದ್ದ ಪರಿಹಾರದ ಚೆಕ್ ಸಹ ಇಲ್ಲವಾಗಿದೆ.
ಹೌದು, ಬೆಳಗಾವಿಯಲ್ಲಿ ಸರ್ಕಾರ ನೀಡಿದ್ದ ಪ್ರವಾಹ ಪರಿಹಾರದ ಚೆಕ್ಗಳು ಬೌನ್ಸ್ ಆಗಿವೆ. ಹಣವೇ ಇಲ್ಲದೆ ತಹಶೀಲ್ದಾರ್, ಜಿಲ್ಲಾಧಿಕಾರಿಗಳು ಚೆಕ್ ನೀಡಿದ್ದಾರೆ.
ಬೆಳಗಾವಿಯ ಗೋಕಾಕ್ ತಾಲ್ಲೂಕಿನಲ್ಲಿ ಸರ್ಕಾರ ವಿತರಿಸಿದ್ದ ಪ್ರಾಥಮಿಕ ಪರಿಹಾರದ ಚೆಕ್ಗಳನ್ನು ತಡೆಹಿಡಿಯಲಾಗಿದೆ. ಕೆಲವು ಚೆಕ್ಗಳು ಬೌನ್ಸ್ ಆಗಿವೆ.

ಬೆಳಗಾವಿ ಹಾಗೂ ಇನ್ನೂ ಕೆಲವು ಭಾಗಗಳಲ್ಲಿ ಪ್ರವಾಹ ಬಂದಾಗ ಸರ್ಕಾರವು ಪ್ರಾಥಮಿಕ ಪರಿಹಾರವಾಗಿ 10 ಸಾವಿರ ರೂಪಾಯಿಗಳ ಚೆಕ್ ಅನ್ನು ನೀಡಿತ್ತು. ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ಇದು ಆ ಕ್ಷಣದ ನೆಮ್ಮದಿಯನ್ನು ಒದಗಿಸಿತ್ತು. ಆದರೆ ಈ ಚೆಕ್ಗಳೇ ಬೌನ್ಸ್ ಆಗಿವೆ.
ಗೋಕಾಕ ತಾಲ್ಲೂಕಿನ ವೀರನಗಡ್ಡಿ ಗ್ರಾಮದ ಸುಮಾರು 160 ಜನ ನೆರೆ ಸಂತ್ರಸ್ತರಿಗೆ 10 ಸಾವಿರ ರೂ.ಗಳ ಚೆಕ್ ನೀಡಲಾಗಿತ್ತು. ಈ ಅವೆಲ್ಲ ಬೌನ್ಸ್ ಆಗಿವೆ. ಕನಿಷ್ಠದ ಪರಿಹಾರವೂ ಸಿಗಲಿಲ್ಲವಲ್ಲ ಎಂದು ಜನ ಅಳಲು ತೋಡಿಕೊಂಡಿದ್ದಾರೆ. ಘಟಪ್ರಭ ಪ್ರವಾಹದಿಂದಾಗಿ ಈ ಗ್ರಾಮ ಸಂಪೂರ್ಣ ಮುಳುಗಡೆಯಾಗಿತ್ತು.
ಮೊದಲಿಗೆ ಇದೇ ಗ್ರಾಮದಲ್ಲಿ 600 ಮಂದಿಗೆ ಚೆಕ್ ನೀಡಲಾಗಿತ್ತು. ಆದರೆ ಇಷ್ಟೋಂದು ಜನರು ಮುಳುಗಡೆಯಿಂದ ತೊಂದರೆಗೆ ಒಳಗಾಗಿಲ್ಲವೆಂದು ಚೆಕ್ಗಳನ್ನು ವಾಪಸ್ ಪಡೆಯಲಾಯಿತು. ಕೊನೆಗೆ 160 ಜನರಿಗೆ ಮಾತ್ರವೇ ಚೆಕ್ ನೀಡಲಾಗಿತ್ತು. ಈಗ ಆ ಚೆಕ್ಗಳು ಸಹ ಬೌನ್ಸ್ ಆಗಿವೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications