ಸರ್ಕಾರ ನೀಡಿದ್ದ ಪ್ರವಾಹ ಪರಿಹಾರದ ಚೆಕ್ಗಳು ಬೌನ್ಸ್
ಬೆಳಗಾವಿ, ಜನವರಿ 31: ಪ್ರವಾಹ ಬಂದು ಬಡವರ ಮುಳುಗಿದ್ದ ಬದುಕಿಗೆ ಹುಲ್ಲು ಕಡ್ಡಿಯ ಆಸರೆಯಂತಗಿದ್ದ ಸರ್ಕಾರ ನೀಡಿದ್ದ ಪರಿಹಾರದ ಚೆಕ್ ಸಹ ಇಲ್ಲವಾಗಿದೆ.
ಹೌದು, ಬೆಳಗಾವಿಯಲ್ಲಿ ಸರ್ಕಾರ ನೀಡಿದ್ದ ಪ್ರವಾಹ ಪರಿಹಾರದ ಚೆಕ್ಗಳು ಬೌನ್ಸ್ ಆಗಿವೆ. ಹಣವೇ ಇಲ್ಲದೆ ತಹಶೀಲ್ದಾರ್, ಜಿಲ್ಲಾಧಿಕಾರಿಗಳು ಚೆಕ್ ನೀಡಿದ್ದಾರೆ.
ಬೆಳಗಾವಿಯ ಗೋಕಾಕ್ ತಾಲ್ಲೂಕಿನಲ್ಲಿ ಸರ್ಕಾರ ವಿತರಿಸಿದ್ದ ಪ್ರಾಥಮಿಕ ಪರಿಹಾರದ ಚೆಕ್ಗಳನ್ನು ತಡೆಹಿಡಿಯಲಾಗಿದೆ. ಕೆಲವು ಚೆಕ್ಗಳು ಬೌನ್ಸ್ ಆಗಿವೆ.

ಬೆಳಗಾವಿ ಹಾಗೂ ಇನ್ನೂ ಕೆಲವು ಭಾಗಗಳಲ್ಲಿ ಪ್ರವಾಹ ಬಂದಾಗ ಸರ್ಕಾರವು ಪ್ರಾಥಮಿಕ ಪರಿಹಾರವಾಗಿ 10 ಸಾವಿರ ರೂಪಾಯಿಗಳ ಚೆಕ್ ಅನ್ನು ನೀಡಿತ್ತು. ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ಇದು ಆ ಕ್ಷಣದ ನೆಮ್ಮದಿಯನ್ನು ಒದಗಿಸಿತ್ತು. ಆದರೆ ಈ ಚೆಕ್ಗಳೇ ಬೌನ್ಸ್ ಆಗಿವೆ.
ಗೋಕಾಕ ತಾಲ್ಲೂಕಿನ ವೀರನಗಡ್ಡಿ ಗ್ರಾಮದ ಸುಮಾರು 160 ಜನ ನೆರೆ ಸಂತ್ರಸ್ತರಿಗೆ 10 ಸಾವಿರ ರೂ.ಗಳ ಚೆಕ್ ನೀಡಲಾಗಿತ್ತು. ಈ ಅವೆಲ್ಲ ಬೌನ್ಸ್ ಆಗಿವೆ. ಕನಿಷ್ಠದ ಪರಿಹಾರವೂ ಸಿಗಲಿಲ್ಲವಲ್ಲ ಎಂದು ಜನ ಅಳಲು ತೋಡಿಕೊಂಡಿದ್ದಾರೆ. ಘಟಪ್ರಭ ಪ್ರವಾಹದಿಂದಾಗಿ ಈ ಗ್ರಾಮ ಸಂಪೂರ್ಣ ಮುಳುಗಡೆಯಾಗಿತ್ತು.
ಮೊದಲಿಗೆ ಇದೇ ಗ್ರಾಮದಲ್ಲಿ 600 ಮಂದಿಗೆ ಚೆಕ್ ನೀಡಲಾಗಿತ್ತು. ಆದರೆ ಇಷ್ಟೋಂದು ಜನರು ಮುಳುಗಡೆಯಿಂದ ತೊಂದರೆಗೆ ಒಳಗಾಗಿಲ್ಲವೆಂದು ಚೆಕ್ಗಳನ್ನು ವಾಪಸ್ ಪಡೆಯಲಾಯಿತು. ಕೊನೆಗೆ 160 ಜನರಿಗೆ ಮಾತ್ರವೇ ಚೆಕ್ ನೀಡಲಾಗಿತ್ತು. ಈಗ ಆ ಚೆಕ್ಗಳು ಸಹ ಬೌನ್ಸ್ ಆಗಿವೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications