ವೈದ್ಯರೇ ಹುಷಾರ್, ಹೀಗೆ ಮಾಡಿದರೆ ಅಮಾನತ್ತಾಗುತ್ತೀರ...
ಬೆಳಗಾವಿ, ನವೆಂಬರ್ 20 : ಸರ್ಕಾರಿ ವೈದ್ಯರೇನಾದರೂ ಸರ್ಕಾರಿ ಆಸ್ಪತ್ರೆಯ ಔಷಧಿ ಕೇಂದ್ರ ಬಿಟ್ಟು ಆಚೆಯ ಖಾಸಗಿ ಮೆಡಿಕಲ್ ಶಾಪ್ ಗಳಲ್ಲಿ ಔಷದಿ ತೆಗೆದುಕೊಳ್ಳಲು ಸೂಚಿಸಿದರೆ ಅಮಾನತ್ತಾಗುವುದು ಗ್ಯಾರಂಟಿ.
ಇಂದು (ನವೆಂಬರ್ 20) ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಈ ವಿಷಯ ಸ್ಪಷ್ಟಪಡಿಸಿದರು.

ಸರ್ಕಾರಿ ಆಸ್ಪತ್ರೆ ವೈದ್ಯರು ರೋಗಿಗಳಿಗೆ ಹೊರಗಡೆಯಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಟ್ಟರೆ ಅವರನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆಯಾ? ಎಂದು ಬಿ.ಜೆ.ಪಿ ಸದಸ್ಯ ರಾಮಚಂದ್ರಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು 'ಹೊರಗೆ ಔಷಧಿ ಕೊಳ್ಳುವಂತೆ ಸೂಚಿಸುವ ವೈದ್ಯರನ್ನು ಅಮಾನತು ಮಾಡಲಾಗುವುದು' ಎಂದರು.
ಮುಂದೆ ಉತ್ತರಿಸಿದ ಸಚಿವರು 'ವೈದ್ಯರು ರೋಗಿಗಳಿಗೆ ಹೊರಗಿನಿಂದ ಔಷಧ ಖರೀಧಿ ಮಾಡಲು ಚೀಟಿ ಬರೆದುಕೊಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಕೊಟ್ಯಂತರ ರೂಪಾಯಿ ಮೌಲ್ಯದ ಔಷಧಗಳ ಎಕ್ಸಪೈರಿ ಡೇಟ್ ಆಗಿ ಸ್ಟಾಕ್ ಹಾಗೇ ಉಳಿದಿತ್ತು. ಹೀಗಾಗಿಯೇ ವೈದ್ಯರು ಬ್ರಾಂಡೆಡ್ ಮೆಡಿಸನ್ ಖರೀಧಿಗೆ ಚೀಟಿ ಬರೆದುಕೊಡುವುದನ್ನು ನಿಷೇಧಿಸಿದ್ದೇವೆ' ಎಂದರು.

ಅಕಸ್ಮಾತ್ ಸರ್ಕಾರಿ ಆಸ್ಪತ್ರೆಯ ಔಷದಾಲಯದಲ್ಲಿ ಅವಶ್ಯಕ ಔಷಧಿ ಇಲ್ಲದಿದ್ದ ಪಕ್ಷದಲ್ಲಿ ಜನರಿಕ್ ಮೆಡಿಕಲ್ ಗೆ ಹೋಗಿ ಕೊಳ್ಳುವಂತೆ ಮಾತ್ರ ಚೀಟಿ ಕೊಡಬೇಕಷ್ಟೆ ಎಂದು ಅವರು ಹೇಳಿದರು.
ಜೊತೆಗೆ ತೀರಾ ತುರ್ತು ಪರಿಸ್ಥಿತಿಯಲ್ಲಿ ಹೊರಗಿನಿಂದ ಔಷಧ ಖರೀಧಿಸಲು ವೈದ್ಯರಿಗೇ ಸರ್ಕಾರವೇ ಹಣ ನೀಡುವ ವ್ಯವಸ್ಥೆ ಮಾಡಲಾಗಿದೆ ಹಾಗಾಗಿ ಖಾಸಗಿ ಮೆಡಿಕಲ್ ಸ್ಟೋರ್ ಗಳಿಗೆ ಸರ್ಕಾರಿ ಆಸ್ಪತ್ರೆಯ ರೋಗಿಗಳನ್ನು ಕಳಿಸುವಂತಿಲ್ಲ ಎಂದರು.
ವೈದ್ಯರು ಔಷಧ ಮಾರಾಟಗಾರರ ಜೊತೆ ಮಾಡಿಕೊಳ್ಳುವ ಅನೈತಿಕ ವ್ಯವಹಾರಿಕ ಸಂಬಂಧದ ಬಗ್ಗೆಯೂ ಮಾತನಾಡಿದ ಸಚಿವರು, 'ಖಾಸಗಿ ಮೆಡಿಕಲ್ ರೆಪ್ರಸೆಂಟಿಟೀವ್ ಗಳು ಸರ್ಕಾರಿ ವೈದ್ಯರನ್ನು ಭೇಟಿ ಮಾಡುವುದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಖಾಸಗಿ ಮೆಡಿಕಲ್ ಸ್ಟೋರ್ ಪ್ರಾರಂಭಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ' ಎಂದರು.
ಪ್ರತಿ ಹದಿನೈದು ದಿನಗಳಿಗೊಮ್ಮೆ ವೈದ್ಯರು ತಮ್ಮ ಇಂಟೆಂಡ್ ಸಲ್ಲಿಸಿ ಇಲಾಖೆಯಿಂದಲೇ ಜನರಿಕ್ ಮೆಡಿಸನ್ ಪಡೆಯಲು ಅವಕಾಶವಿದೆ, ಇಂಟೆಂಡ್ ಸಲ್ಲಿಸಿದ 48 ಗಂಟೆಗಳಲ್ಲಿ ಔಷಧ ಪೂರೈಕೆ ಮಾಡಲಾಗುತ್ತದೆ, ಯಾವುದೇ ಕಾರಣಕ್ಕೂ ಆಸ್ಪತ್ರೆ ಗಳಲ್ಲಿ ಅವಧಿ ಮೀರಿದ ಔಷಧಗಳ ಸಂಗ್ರಹ ಇಡುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications