ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ರಮೇಶ್ ಸೋಲಿಸುವುದಕ್ಕಿಂತ ಅಶೋಕ ಪೂಜಾರಿ ಗೆಲ್ಲಿಸುವುದೇ ನನ್ನ ಹೋರಾಟ"

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 18: "ನನಗೆ ಉಪ ಚುನಾವಣೆ ಸವಾಲಾಗಿದೆ. ನಾನು ಸಿಎಂ ಆಗಿದ್ದಾಗ ಬೆಳಗಾವಿ ಜಿಲ್ಲೆಗೆ ಹೆಚ್ಚಿಗೆ ಅನುದಾನ ಕೊಟ್ಟಿದ್ದೇನೆ. ಜಿಲ್ಲೆಗೆ ನನ್ನದೇ ಆದ ಕೊಡುಗೆ ನೀಡಿದ್ದೇನೆ. ಆದ್ದರಿಂದ ಇಲ್ಲಿ ಗೆಲ್ಲುವ ನಿರೀಕ್ಷೆಯಿದೆ" ಎಂದು ಹೇಳಿದ್ದಾರೆ ಎಚ್.ಡಿ.ಕುಮಾರಸ್ವಾಮಿ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ನಾನು ಆತುರ ಪಡದೆ ಇಲ್ಲಿ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇನೆ. ಅಶೋಕ ಪೂಜಾರಿ ಅವರು ಸ್ವಂತ ಮನೆಗೆ ಬಂದಿದ್ದಾರೆ. ಅವರು ಪಕ್ಷಾಂತರ ಮಾಡಿಲ್ಲ. ಇವತ್ತು ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ನಾನು ಒಂದು ವಾರ ಬೆಳಗಾವಿಯಲ್ಲಿ ಇದ್ದು ಪ್ರಚಾರ ಮಾಡುವೆ" ಎಂದು ತಿಳಿಸಿದ್ದಾರೆ.

 ಗೋಕಾಕ್ ಚುನಾವಣಾ ಕಣದಲ್ಲಿ ಸಹೋದರರ ಸವಾಲ್, ಪೂಜಾರಿಗೆ ಎಚ್ ಡಿಕೆ ಸಾಥ್ ಗೋಕಾಕ್ ಚುನಾವಣಾ ಕಣದಲ್ಲಿ ಸಹೋದರರ ಸವಾಲ್, ಪೂಜಾರಿಗೆ ಎಚ್ ಡಿಕೆ ಸಾಥ್

"ಈ ಕ್ಷೇತ್ರ ನನಗೆ ಪ್ರತಿಷ್ಠೆಯ ವಿಚಾರವಾಗಿದೆ. ನಾನು ಗೋಕಾಕ್ ನಲ್ಲಿ ನಮ್ಮ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವೆ. ಗೋಕಾಕ್ ನಲ್ಲಿ ಜನತೆಯ ಆಶೀರ್ವಾದದಿಂದ ಅಭ್ಯರ್ಥಿ ಜಯ ಪಡೆಯಲಿದ್ದಾರೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Hd Kumaraswamy Came To Belagavi In Favour OF Ashoka Pujari

ಇದೇ ಸಂದರ್ಭ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ವಿಚಾರವಾಗಿಯೂ ಮಾತನಾಡಿದ ಅವರು, "ಮೈತ್ರಿ ಸರ್ಕಾರ ಪತನಕ್ಕೆ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಕಾರಣವಾಗಿದ್ದಾರೆ. ರೈತರ ದುಡ್ಡಲ್ಲಿ ಸಾಹುಕಾರ ಸಾಹುಗಾರಿಕೆ ಮಾಡಿಕೊಂಡಿದ್ದಾರೆ. ಆದರೆ ಸದ್ಯಕ್ಕೆ ರಮೇಶ್ ಅವರನ್ನು ಸೋಲಿಸುವುದಕ್ಕಿಂತ ಅಶೋಕ ಪೂಜಾರಿ ಗೆಲ್ಲಿಸುವ ಹೋರಾಟ ನನ್ನದಾಗಿದೆ. ರಮೇಶ್ ಕರ್ಮಕಾಂಡವನ್ನು ಅವರ ಸಹೋದರರೇ ಹೇಳಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿಗೆ ದುರಹಂಕಾರವಿದೆ, ಜನರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ" ಎಂದಿದ್ದಾರೆ.

English summary
"Gokak by election is challenge for me. When I was CM, I gave a lot of grant to Belagavi district. So i expect to win here" said Hd kumaraswamy in belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X