ಬೆಳಗಾವಿಯಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಉತ್ತರ ಕರ್ನಾಟಕಾದ್ಯಂತ ಭಾರಿ ಮಳೆಯಾಗುತ್ತಿದೆ.
ಕಳೆದ ಎರಡ್ಮೂರು ದಿನಗಳಿಂದ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆಗೆ ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ಬೆಳಗಾವಿ ತಾಲೂಕಿನ ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಮಳೆ ಅವಾಂತರ ಸೃಷ್ಟಿಸಿದೆ. ಖಾನಾಪೂರ ತಾಲೂಕಿನಾದ್ಯಂತ ಭಾರೀ ಮಳೆಯಿಂದ ಅಪಾಯದ ಮಟ್ಟ ಮೀರಿ ಹಳ್ಳಕೊಳ್ಳಗಳು ಹರೀತಿವೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ತಾಲೂಕಿನ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಇನ್ನೂ ಮಳೆ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 31ಜುಲೈ ಮತ್ತು ಆಗಸ್ಟ್ 1ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮುಂದುವರಿದ ಭಾರಿ ಮಳೆಯಿಂದಾಗಿ ಚಿಕ್ಕೋಡಿ ತಾಲೂಕಿನ ವೇದಗಂಗಾ, ಧೂಧಗಂಗಾ, ಕೃಷ್ಣಾ ನದಿ ನೀರಿನಲ್ಲಿ ಭಾರೀ ಏರಿಕೆಯಾಗಿದೆ. 6 ಕೆಳ ಹಂತದ ಸೇತುವೆಗಳ ಜಲಾವೃತ, ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿದ್ದರೂ ಸೇತುವೆಗಳ ಮೇಲೆ ಜನ ಸಂಚರಿಸುತ್ತಿದ್ದಾರೆ.
ಯಾದಗಿರಿಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 20 ಗೇಟುಗಳ ಮೂಲಕ ನೀರು ಬಿಡಲಾಗಿದೆ. ಈ ಕಡೆ ಮಹಾರಾಷ್ಟ್ರದಲ್ಲಿ ನಿರಂತರ ವರುಣನ ಆರ್ಭಟದಿಂದ ವಿಜಯಪುರದ ಆಲಮಟ್ಟಿ ಲಾಲಾಬಹದ್ದೂರ್ ಶಾಸ್ತ್ರಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಅಲ್ಲದೆ ರಾಯಚೂರಿನ ನಾರಾಯಣಪುರ ಜಲಾಶಯ ಕೂಡ ಭರ್ತಿಯಾಗಿದೆ. 20 ಗೇಟುಗಳಿಂದ ಜಲಾಶಯದಿಂದ 1.63 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ ಕೆಳಭಾಗದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಕೆಲವು ಗ್ರಾಮಗಳಿಂದ ಸಂಪರ್ಕ ಕಡಿತ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications