ಹೀರೋ ಮತ್ತೆ ರಾಜ್ಯಕ್ಕೆ ಬಂದೇ ಬರುತ್ತದೆ : ಸಿದ್ದರಾಮಯ್ಯ
ಬೆಳಗಾವಿ, ಡಿ. 18 : ಯಾವುದೇ ಕಾರಣಕ್ಕೂ ಕೈಗಾರಿಕೆಗಳು ರಾಜ್ಯದಿಂದ ಕೈತಪ್ಪಿ ನೆರೆಯ ರಾಜ್ಯಕ್ಕೆ ಹೋಗಲು ಅವಕಾಶ ನೀಡುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ನಲ್ಲಿಂದು ಸದಸ್ಯೆ ತಾರಾ ಅನುರಾಧ ಅವರು ಧಾರವಾಡದಲ್ಲಿ ಸ್ಥಾಪನೆಗೊಳ್ಳಬೇಕಿದ್ದ ಹೀರೋ ಮೊಟೋ ಕಾರ್ಪ್ಸ್ ಲಿಮಿಟೆಡ್ ಕಂಪನಿ ಹೈದರಾಬಾದ್ಗೆ ಹೋಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಹೀರೋ ಹೋಂಡಾ ಕಂಪನಿಯವರು ತಪ್ಪು ನಿರ್ಧಾರ ಮಾಡಿ ನಮ್ಮ ರಾಜ್ಯವನ್ನು ಬಿಟ್ಟು ನೆರೆಯ ರಾಜ್ಯಕ್ಕೆ ಹೋಗಿದ್ದಾರೆ. ಅವರೇ ಮತ್ತೆ ನಮ್ಮ ರಾಜ್ಯಕ್ಕೆ ಮರುಳುತ್ತಾರೆ ನೋಡಿ ಎಂದರು. [ಹೀರೋ ಮೋಟೊಕಾರ್ಪ್ ಗೆ ಕೈ ಕೊಟ್ಟ ಕರ್ನಾಟಕ]

ಆಂಧ್ರಕ್ಕೆ ರಾಜ್ಯದಿಂದ ಒಂದು ಕೈಗಾರಿಕೆ ಹೋದರೆ ಅಲ್ಲಿಂದ 50 ಔಷಧ ಕಂಪನಿಗಳು ನಮ್ಮ ರಾಜ್ಯದಲ್ಲಿ ಕಂಪನಿ ಸ್ಥಾಪಿಸಲು ಮುಂದೆ ಬಂದಿವೆ. ಹೀರೋ ಹೋಂಡಾ ಕಂಪನಿಯವರಿಗೆ ಸರ್ಕಾರದ ವತಿಯಿಂದ 300 ಎಕರೆ ಜಮೀನನ್ನು ಮಂಜೂರು ಮಾಡಲಾಗಿತ್ತು. ಹೆಚ್ಚುವರಿಯಾಗಿ 200 ಎಕರೆ ಜಮೀನು ನೀಡಲು ನಿರ್ಧರಿಸಲಾಗಿತ್ತು. ಹಾಗೆಯೇ ಹೊಸ ಕೈಗಾರಿಕಾ ನೀತಿಯಡಿ ನೀಡಬಹುದಾದ ಎಲ್ಲಾ ಸವಲತ್ತುಗಳನ್ನು ನೀಡಲು ಸರ್ಕಾರವು ಬದ್ಧವಾಗಿತ್ತು. ಆದಾಗ್ಯೂ ಅವರು ನೆರೆ ರಾಜ್ಯಕ್ಕೆ ಹೋಗಿದ್ದಾರೆ. ಆಂಧ್ರ ಸರ್ಕಾರದ ಉಚಿತ ಭೂಮಿ ತೆರಿಗೆ ವಿನಾಯಿತಿಯ ಭರವಸೆಯನ್ನು ನಂಬಿ ಹೋಗಿದ್ದಾರೆ. ಸದ್ಯದಲ್ಲೇ ತಪ್ಪಿನ ಅರಿವಾಗಿ ಖಂಡಿತವಾಗಿಯೂ ಅವರು ನಮ್ಮ ರಾಜ್ಯಕ್ಕೆ ಬರುತ್ತಾರೆಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ತಯಾರಿಸಿರುವ ಹೊಸ ಕೈಗಾರಿಕಾ ನೀತಿ 2014-19ರಲ್ಲಿ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚುವರಿ ರಿಯಾಯಿತಿ ಮತ್ತು ಉತ್ತೇಜನವನ್ನು ಪ್ರಕಟಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಮಹಿಳೆಯರು, ಹಿಂದುಳಿದ ವರ್ಗದವರಿಗೆ ಆಕರ್ಷಕ ಸಬ್ಸಿಡಿಯನ್ನು ನೀಡಲಾಗಿದೆ. ಅಲ್ಲದೆ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ನೀಡುವಂತಹ ವಿಶೇಷ ಕೈಗಾರಿಗಾ ಪ್ಯಾಕೇಜ್ ಅನ್ನು ನಮ್ಮ ರಾಜ್ಯಕ್ಕೂ ನೀಡುವಂತೆ ಪ್ರಧಾನಿಯವರಿಗೆ ಕೋರಿದ್ದೇನೆ ಎಂದು ತಿಳಿಸಿದರು.
ಸದಸ್ಯೆ ತಾರಾ ಅವರಿಗೆ ಯಾರೋ ತಪ್ಪು ಮಹಿತಿ ನೀಡಿದ್ದಾರೆ, ಅಥವಾ ಈ ಬಗ್ಗೆ ಅಪಪ್ರಚಾರವಾಗಿದೆ. ಸರ್ಕಾರವು ಯವುದೇ ಕಾರಣಕ್ಕೂ ಕೈಗಾರಿಕೆಗಳು ರಾಜ್ಯದಿಂದ ತಪ್ಪಿ ಹೋಗಲು ಬಿಡುವುದಿಲ್ಲ. ಆದ್ದರಿಂದ ತಾವು ಈ ಬಗ್ಗೆ ನಿಶ್ಚಿಂತೆಯಿಂದ ಇರಬಹುದೆಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications