ಬೆಳಗಾವಿಯಲ್ಲಿ ನಡೆಯಿತಾ ಮರ್ಯಾದಾ ಹತ್ಯೆ?
ಬೆಳಗಾವಿ, ಅ, 23 : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಪ್ರೇಮಿಗಳಿಬ್ಬರನ್ನು ಮರಕ್ಕೆ ಕಟ್ಟಿದಹಾಕಿ ಮಚ್ಚಿನಿಂ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳವಾರ ರಾತ್ರಿ ಚಿಕ್ಕೋಡಿ ತಾಲೂಕಿನ ಮಮದಾಪುರ ಗ್ರಾಮದ ನಿವಾಸಿಗಳಾದ ಬಸವರಾಜ್ ಬುವಜಿ (24) ಮತ್ತು ಸಂಗೀತಾ ಹಳ್ಳೂರ (20) ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು, ಇದರಿಂದ ಕೋಪಗೊಂಡ ಸಂಗೀತಾ ಪೋಷಕರು ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಗೀತಾ ಮತ್ತು ಬಸವರಾಜ್ ಪರಸ್ಪರ ಪ್ರೀತಿಸುತ್ತಿದ್ದರು ಇದನ್ನು ತಿಳಿದ ಆಕೆಯ ಕುಟುಂಬದವರು, ಬೇರೊಬ್ಬರೊಂದಿಗೆ ಕೆಲವು ದಿನಗಳ ಹಿಂದೆ ಆಕೆಯ ಮದುವೆ ಮಾಡಿದ್ದರು. ಎರಡು ದಿನಗಳ ಹಿಂದೆ ಪತಿಯ ಮನೆಯಿಂದ ಸಂಗೀತಾ ತವರಿಗೆ ಆಗಮಿಸಿದ್ದಳು.
ಮಂಗಳವಾರ ರಾತ್ರಿ ಸಂಗೀತಾ ಮತ್ತು ಬಸವರಾಜ್ ಮಮದಾಪುರ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯ ಬಳಿ ಪರಸ್ಪರ ಭೇಟಿಯಾಗಿದ್ದಾರೆ. ಈ ವಿಷಯ ಸಂಗೀತಾ ಪೋಷಕರಿಗೆ ತಿಳಿದಿದೆ. ಸ್ಥಳಕ್ಕೆ ಧಾವಿಸಿದ ಅವರು, ಇಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ತಮ್ಮ ಮಗಳ ವರ್ತನೆಯಿಂದ ಕೋಪಗೊಂಡ ಸಂಗೀತಾ ಪೋಷಕರು ಸಂಬಂಧಿಕರೊಂದಿಗೆ ಸೇರಿ, ಈ ಕೊಲೆ ಮಾಡಿದ್ದಾರೆ ಇದು ಮರ್ಯಾದಾ ಹತ್ಯೆ ಪ್ರಕರಣ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕೋಡಿ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರೇಯಸಿ ನೋಡಲು ಬಂದು ಹೆಣವಾದ : ಸಂಗೀತಾ ಮತ್ತು ಬಸವರಾಜ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಸಂಗೀತಾ ಬೇರೊಬ್ಬರೊಂದಿಗೆ ವಿವಾಹವಾದರೂ ಬಸವರಾಜ್ ಆಕೆಯ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸುತ್ತಿದ್ದ. ತವರಿಗೆ ಆಗಮಿಸಿದಾಗ ತನ್ನನ್ನು ಭೇಟಿ ಮಾಡುವಂತೆ ಸಂಗೀತಾಳಿಗೆ ಮನವಿ ಮಾಡಿದ್ದ.
ಅದರಂತೆ ತವರಿಗೆ ಆಗಮಿಸಿದ್ದ ಸಂಗೀತಾ ಬಸವರಾಜ್ ಗೆ ಕರೆ ಮಾಡಿ ತೋಟದ ಮನೆ ಸಮೀಪ ಭೇಟಿಯಾಗೋಣ ಎಂದು ಹೇಳಿದ್ದಳು. ಅದರಂತೆ ಮಂಗಳವಾರ ರಾತ್ರಿ ತೋಟದ ಮನೆಯ ಬಳಿ ಪ್ರೇಯಸಿ ನೋಡಲು ಬಂದಿದ್ದಿ ಬಸವರಾಜ್ ಕೊಲೆಯಾಗಿ ಹೋಗಿದ್ದಾನೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications