Vande Bharat: ಈ ನಿಲ್ದಾಣದಲ್ಲಿ ಕೂಡ ನಿಲ್ಲಲಿದೆ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು
ಭಾರತೀಯ ರೈಲ್ವೆಯ ವಂದೇ ಭಾರತ್ ರೈಲುಗಳ ನಿಲುಗಡೆಗೆ ಬೇಡಿಕೆ ಹೆಚ್ಚುತ್ತಿದೆ. ಹೆಚ್ಚಿನ ಬೇಡಿಕೆ ಇರುವ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಕೂಡ ಅನುಮೋದನೆ ನೀಡುತ್ತಿದೆ. ಇದೀಗ ಪುಣೆ - ಹುಬ್ಬಳ್ಳಿ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಬೆಳಗಾವಿ ಜಿಲ್ಲೆಯ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲ್ಲಲಿದ್ದು ಈ ಭಾಗದ ಪ್ರಯಾಣಿಕರಿಗೆ ಖುಷಿ ತಂದಿದೆ.
ಪುಣೆ-ಬೆಳಗಾವಿ ವಂದೇ ಭಾರತ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕು ಎಂದು ಸಂಸದ ಈರಣ್ಣ ಕಡಾಡಿ ಅವರ ಪ್ರಸ್ತಾವನೆ ಸಲ್ಲಿಸಿದ್ದರು. ಸಂಸದರ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಸಂಸದರ ಬೇಡಿಕೆಗೆ ರೈಲ್ವೆ ಸಚಿವಾಲಯ ಸ್ಪಂದಿಸಿರುವುದು ಈ ಭಾಗದ ರೈಲು ಪ್ರಯಾಣಿಕರ ಖುಷಿ ಹೆಚ್ಚಿಸಿದೆ.

ಹುಬ್ಬಳ್ಳಿ, ಧಾರವಾಡ, ಬೆಳಗವಾಗಿ, ಮೀರಜ್, ಕರಡ್, ಸತಾರಾ, ಸಾಂಗ್ಲಿ, ಕೊಲ್ಲಾಪುರ, ಪುಣೆಯನ್ನು ಸಂಪರ್ಕಿಸುವ ವಂದೇ ಭಾರತ್ ರೈಲು ಇದೀಗ ಘಟಪ್ರಭಾ ನಿಲ್ದಾಣದಲ್ಲಿ ನಿಲುಗಡೆ ನೀಡಲಿದೆ. ಹುಬ್ಬಳ್ಳಿ ಮತ್ತು ಪುಣೆ ಸೇರಿದಂತೆ ಪ್ರಮುಖ ನಗರಗಳಿಗೆ ಪ್ರಯಾಣಿಸುವ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಂತಾಗಿದೆ.
ಪ್ರಾಯೋಗಿಕ ನಿಲುಗಡೆ
ಸದ್ಯ ಸಂಸದ ಈರಣ್ಣ ಕಡಾಡಿ ಅವರ ಮನವಿ ಮೇರೆಗೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆ ನೀಡಲಿದೆ. ಆದರೆ ಇರು ತಾತ್ಕಾಲಿಕವಾಗಿದ್ದು, ಪ್ರಾಯೋಗಿಕ ಆಧಾರದ ಮೇಲೆ ನಿಲುಗಡೆ ನೀಡಲಿದೆ. ಇಲ್ಲಿ ಟಿಕೆಟ್ ಮಾರಾಟವನ್ನು ಆಧರಿಸಿ ಬಳಿಕ ನಿಲುಗಡೆಯನ್ನು ಶಾಶ್ವತಗೊಳಿಸುವ ಅಥವಾ ರದ್ದು ಮಾಡುವ ನಿರ್ಧಾರವನ್ನು ರೈಲ್ವೆ ಇಲಾಖೆ ಮಾಡಲಿದೆ.
ಆಧುನಿಕ ಮತ್ತು ಆರಾಮದಾಯಕ ಪ್ರಯಾಣದ ಅನುಭವ ನೀಡಲು ವಂದೇ ಭಾರತ್ ರೈಲುಗಳನ್ನು ಪರಿಚಯಿಸಲಾಗಿದೆ. ಪ್ರಮುಖ ನಗರಗಳ ನಡುವೆ ವೇಗದ ಸಂಪರ್ಕ ಸಾಧಿಸಲು ವಂದೇ ಭಾರತ್ ರೈಲುಗಳು ಕಾರ್ಯ ನಿರ್ವಹಿಸುತ್ತಿದ್ದು ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ನೀಡುತ್ತಿದೆ.
ಸದ್ಯ ಹುಬ್ಬಳ್ಳಿ - ಪುಣೆ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಹುಬ್ಬಳ್ಳಿ ಪುಣೆ ನಡುವೆ ಚೇರ್ ಕಾರ್ ಟಿಕೆಟ್ ದರ 1,295 ರೂಪಾಯಿ ಆಗಿದ್ದು, ಎಕ್ಸಿಕ್ಯುಟಿವ್ ಚೇರ್ ಕಾರ್ ದರ ಆಹಾರ ಸಹಿತ 2,290 ರೂಪಾಯಿ ಮತ್ತು ಆಹಾರ ರಹಿತ 1890 ರೂಪಾಯಿ ಆಗಿದೆ. ಹುಬ್ಬಳ್ಳಿಯಿಂದ ಪುಣೆಗೆ ಪ್ರಯಾಣಿಸುವ ಸಮಯ 8 ಗಂಟೆ 30 ನಿಮಿಷಗಳಾಗಿದೆ. ಸದ್ಯ ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದು, ಹುಬ್ಬಳ್ಳಿಯಲ್ಲಿ ಬೆಳಗ್ಗೆ 5 ಗಂಟೆಗೆ ಹೊರಡುವ ರೈಲು ಮಧ್ಯಾಹ್ನ 1.30 ಗಂಟೆಗೆ ಪುಣೆ ತಲುಪುತ್ತದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications