'ಸ್ವಾತಂತ್ರ್ಯ ನಡಿಗೆ' ಕರೆಗೆ 1 ಲಕ್ಷ ಮಂದಿ ಸ್ಪಂದನೆ: ಡಿಕೆ ಶಿವಕುಮಾರ್
ಬೆಂಗಳೂರು ಆಗಸ್ಟ್ 15: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸೋಮವಾರ ಹಮ್ಮಿಕೊಂಡ 'ಸ್ವಾತಂತ್ರ್ಯ ನಡಿಗೆ' (ಫ್ರಿಡಂ ಮಾರ್ಚ್)ಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕರೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿ ಸ್ಪಂದಿಸಿದ್ದಾರೆ.
ಸೋಮವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ವರೆಗೆ ಕೆಪಿಸಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಸ್ವಾತಂತ್ರ್ಯ ನಡಿಗೆ ನಡೆಯಲಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ತುಂಬಿದ ಈ ಘಳಿಗೆಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ವೀರರು, ಶೂರರ ತ್ಯಾಗ ಬಲಿದಾನ ಸ್ಮರಣೆಗಾಗಿ, ಮಹನೀಯರಿಗೆ ಗೌರವ ಸಲ್ಲಿಸಲು ಈ ನಡಿಗೆ ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖಂಡರಾದ ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಗಟ್ಟಲೆ ಜನರು ಸೇರುವ ನಿರೀಕ್ಷೆ ಇದೆ. ರಸ್ತೆಯುದ್ದಕ್ಕೂ ನೂರಾರು ಸಂಖ್ಯೆಯಲ್ಲಿ ಸ್ವಾತಂತ್ರ್ಯ ಭಾರತದ ಸಂಕೇತವಾದ ತ್ರಿವರ್ಣ ಧ್ವಜ ರಾರಾಜಿಸಲಿವೆ.

ನಡಿಗೆಯಲ್ಲಿ ಲಕ್ಷ ಮಂದಿ ಭಾಗಿ
ಕಾಂಗ್ರೆಸ್ ಕರ್ನಾಟಕದ ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ.ಶಿವಕುಮಾರ್ ಅವರು ನೀಡಿದ ಕರೆಗೆ ಒಂದು ಲಕ್ಷ ಜನರು ಸ್ಪಂದಿಸಿದ್ದಾರೆ. ತಾವು ನಡಿಗೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ಸರಿಯಾದ ಗುರಿ ನಿರ್ಧರಿಸಿದರೆ ನಾವು ಅರ್ಧ ದಾರಿ ತಲುಪಿದಂತೆ. ಸ್ವಾತಂತ್ರ್ಯ ನಡಿಗೆಗೆ ಜನ ಸೇರಿಸುವ ನಮ್ಮ ನಿರೀಕ್ಷೆ ಹುಸಿಯಾಗಿಲ್ಲ ಎಂದು ಅವರಿಗೆಲ್ಲ ಅಭಿನಂದನೆ ತಿಳಿಸಿದರು.
ಇದಕ್ಕೆ ಪೂರಕವಾಗಿ ಕಾಂಗ್ರೆಸ್ನ ಶಾಸಕರು, ಕಾಂಗ್ರೆಸ್ ಯುವ ಮೋರ್ಚಾ ಅಧ್ಯಕ್ಷರು, ಶಾಸಕರು, ಹಿರಿಯ ಮುಖಂಡರು ಅಭಿಯಾನ ಆರಂಭಿಸಿದ್ದಾರೆ. ನಾವು ಸ್ವಾತಂತ್ರ್ಯ ನಡಿಗೆಯಲ್ಲಿ ಪಾಲ್ಗೊಳ್ಳುತ್ತೇವೆ. ನೀವು ಪಾಲ್ಗೊಳ್ಳಿ ಎಂದು ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ. ಮಧ್ಯಾಹ್ನ ಆರಂಭವಾಗುವ ಕಾರ್ಯಕ್ರಮ ಸಂಬಂಧ ಪೊಲೀಸರು ಸೂಕ್ತ ಬಿಗಿ ಭದ್ರತೆ ಒದಗಿಸಲು ಸಜ್ಜಾಗಿದ್ದಾರೆ. ಸಂಜೆ ನ್ಯಾಷನಲ್ ಕಾಲೇಜು ಮೈದಾನದತ್ತ ಹೆಜ್ಜೆ ಹಾಕುವ ಕಾಂಗ್ರೆಸ್ ನಾಯಕರು ಅಲ್ಲಿ ವೇದಿಕೆಯಲ್ಲಿ ಸ್ವಾತಂತ್ರೋತ್ಸವ ಕುರಿತು, ಹೋರಾಟಗಾರರು ತ್ಯಾಗ, ಬಲಿದಾನ, ಕಾಂಗ್ರೆಸ್ ಚಿಂತನೆ ಕುರಿತು ಮಾತನಾಡಲಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications