ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ ಹುಕ್ಕೇರಿ ಮಠದ ಸ್ವಾಮೀಜಿ
ಬೆಳಗಾವಿ, ಮೇ 18: ರಾಜ್ಯದ ಎಲ್ಲಾ ಧರ್ಮದ ಅರ್ಚಕರ (ಪುರೋಹಿತರ) ಕುಟುಂಬಗಳ ನೆರವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬರಬೇಕೆಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿಗಳು ಮನವಿ ಮಾಡಿದ್ದಾರೆ.
ಲಾಕ್ ಡೌನ್ ಜಾರಿಯಾಗಿ ಸುಮಾರು ಎರಡು ತಿಂಗಳಾಗಿದ್ದು, ದೇವಸ್ಥಾನ, ಮಠಗಳ ಬಾಗಿಲು ಬಂದ್ ಮಾಡಲಾಗಿದೆ. ದಿನನಿತ್ಯ ಕೇವಲ ದೇವರ ಪೂಜೆ ಮಾಡಿ ಭಕ್ತರು ನೀಡುವ ಸಹಾಯದಿಂದ ಎಷ್ಟೋ ಅರ್ಚಕರ(ಪುರೊಹಿತರ) ಕುಟುಂಬಗಳು ಜೀವನ ಸಾಗಿಸುತ್ತಿದ್ದರು. ಆದರೆ ಲಾಕ್ ಡೌನ್ ನಿಂದ ಅಂತಹ ಸಾವಿರಾರು ಕುಟುಂಬಗಳು ಇಂದು ಸಂಕಷ್ಟಕ್ಕೆ ಸಿಲುಕಿವೆ ಎಂದರು.
ಅವರು ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ತಮ್ಮ ಹುಕ್ಕೇರಿ ಹಿರೇಮಠದ ಆವರಣದಲ್ಲಿ ಎಲ್ಲ ಧರ್ಮದ ವಿವಿಧ ದೇವಸ್ಥಾನಗಳು, ಮಠ, ಬಸ್ತಿ ಹಾಗೂ ಮಸೀದಿಗಳ ಅರ್ಚಕರು, ಪೂಜಾರಿಗಳು, ಮೌಲಾಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಹಾರದ ದಿನಸಿ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಜನಪ್ರತಿನಿಧಿಗಳು ಅರ್ಚಕರ ನೆರವಿಗೆ ಬರಬೇಕು, ಅಲ್ಲದೇ ಈಗಾಗಲೇ ಹುಕ್ಕೇರಿ ಮಠದಿಂದ ಜಿಲ್ಲೆಯಾದ್ಯಂತ 2 ಸಾವಿರ ಮಾಸ್ಕ್, ಒಂದು ಸಾವಿರ ಆಹಾರ ಕಿಟ್ ಗಳನ್ನು ಕೂಲಿ ಕಾರ್ಮಿಕರಿಗೆ, ಬಡ ಕುಟುಂಬಗಳಿಗೆ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಯಬಾಗ ಶಾಸಕ ಡಿ.ಎಂ ಐಹೊಳೆ, ಅರುಣ ಐಹೊಳೆ, ರವಿ ರಂಗೋಲಿ, ತಾಲೂಕಿನ ವಿವಿಧ ದೇವಸ್ಥಾನಗಳ ಅರ್ಚಕರು ಉಪಸ್ಥಿತರಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications