ಕೊಳವೆಬಾವಿಗೆ ಬಿದ್ದ ಮಗು: ನಾನೇನು ದೇವ್ರಾ, ಸಚಿವರ ಉಡಾಫೆ
ಸಾರ್ ನೀವು ಸ್ವಲ್ಪ ಬೇಗ ಬರಬಹುದಿತ್ತಲ್ಲವೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನಾನೇನು ದೊಡ್ಡ ತಪ್ಪು ಮಾಡಿದೆ? ನಾನೇನು ದೇವರಾ? ಎಂದು ರಮೇಶ್ ಜಾರಕೊಹೊಳೆ ಪ್ರತ್ಯುತ್ತರ
ಅಥಣಿ (ಬೆಳಗಾವಿ), ಏ 23 : ತಾಲೂಕಿನ ಝಂಜರವಾಡ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯೊಳಗೆ ಬಿದ್ದ 6 ವರ್ಷದ ಕಂದಮ್ಮ ಕಾವೇರಿಯನ್ನು ಪತ್ತೆಹಚ್ಚುವ ಕಾರ್ಯ ಭರದಿಂದ ಸಾಗುತ್ತಿದ್ದ, ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮಾಧ್ಯಮದ ಪ್ರಶ್ನೆಗೆ ಉಡಾಫೆಯ ಉತ್ತರವನ್ನು ನೀಡಿದ್ದಾರೆ.
ರಕ್ಷಣಾ ಸ್ಥಳಕ್ಕೆ ತಡವಾಗಿ ಆಗಮಿಸಿದ ರಮೇಶ್ ಜಾರಕಿಹೊಳೆ ಅವರನ್ನು, ಸಾರ್ ನೀವು ಸ್ವಲ್ಪ ಬೇಗ ಬರಬಹುದಿತ್ತಲ್ಲವೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಜಾರಕಿಹೊಳೆ, ನಾನೇನು ದೊಡ್ಡ ತಪ್ಪು ಮಾಡಿದೆ? ನಾನೇನು ದೇವರಾ ಎಂದು ಪ್ರತ್ಯುತ್ತರ ನೀಡಿದ್ದಾರೆ. [ಕೊಳವೆ ಬಾವಿಯಲ್ಲಿ ಬಿದ್ದ ಬಾಲಕಿ ಬದುಕಿ ಬರಲಿ]

ಇಡೀ ರಾಜ್ಯಕ್ಕೆ ಒಳ್ಳೆ ಪ್ರಶ್ನೆ ಕೇಳ್ದೆ ಬಿಡಪ್ಪಾ ನೀನು, ಅಲ್ಲಯ್ಯಾ ನಿನ್ನೆಯಿಂದ ಸತತವಾಗಿ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದೇನೆ. ಬೇಗ ಬಂದು ಕೆಲಸ ಸಾಧಿಸೋಕೆ ನಾನೇನು ದೇವರಾ ಎನ್ನುವ ಉತ್ತರವನ್ನು ರಮೇಶ್ ಜೊರಕಿಹೊಳೆ ನೀಡಿದ್ದಾರೆ.
ನಿನ್ನೆಯಿಂದ ಟೆಲಿಫೋನ್ ಮೂಲಕ ಸಲಹೆ ಸೂಚನೆ ನೀಡುತ್ತಿದ್ದೇನೆ. ಸ್ಥಳಕ್ಕೆ ಬರೋದೇ ಇರೋದು ಅದೇನು ದೊಡ್ಡತಪ್ಪಾ? ನಮ್ಮ ಜಿಲ್ಲಾಡಳಿತದ ಮೇಲೆ ನಮಗೆ ವಿಶ್ವಾಸವಿದೆ. ಎಷ್ಟು ಖರ್ಚು ಮಾಡಿದ್ರೂ, ಮಗು ಬದುಕಿಬರೋಕೆ ಸಾಧ್ಯವಿಲ್ಲ. ಬದುಕಿ ಬಂದ್ರೆ ಸಂತೋಷ.
ಮಗು ಬದುಕಿ ಬರಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಕೆಟ್ಟ ವಿಚಾರ ಈಗ ಚರ್ಚಿಸೋದು ಬೇಡ. ಮಗುವಿನ ತಂದೆತಾಯಿಗೆ ಪರಿಹಾರ ಕೊಡುವ ವಿಚಾರದಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಮೇಶ್ ಜಾರಕಿಹೊಳೆ ಹೇಳಿದ್ದಾರೆ.
ಘಟನೆಯ ವಿವರ: ಇಲ್ಲಿನ ಝಂಜರವಾಡ ಗ್ರಾಮದ ಜಮೀನಿನೊಂದರಲ್ಲಿ ತೋಡಿಸಲಾಗಿದ್ದ ಕೊಳವಿ ಬಾವಿಯಲ್ಲಿ ಕಾವೇರಿ ಎಂಬ 6 ವರ್ಷದ ಹೆಣ್ಣು ಮಗು ಶನಿವಾರ ಸಂಜೆ (ಏ 22) ಬಿದ್ದಿತ್ತು. ಕಾವೇರಿಯನ್ನು ಜೀವಂತ ಹೊರತೆಗೆಯುವ ಕಾರ್ಯ ಭಾನುವಾರ ಬೆಳಗ್ಗಿನಿಂದ ಭರದಿಂದ ಸಾಗಿದೆ.
ತಮ್ಮನೊಂದಿಗೆ ಆಟವಾಡುತ್ತಿದ್ದಾಗ ಕಾವೇರಿ ಅಕಸ್ಮಾತಾಗಿ ತೆರೆದ ಬಾವಿಯೊಳಗೆ ಬಿದ್ದಿದ್ದಳು. ಕೊಳವೆಬಾವಿಯನ್ನು ಸರಿಯಾಗಿ ಮುಚ್ಚಿರದಿದ್ದರಿಂದ ಈ ದುರಂತ ಸಂಭವಿಸಿದೆ. ಕಾವೇರಿ ಜೀವಂತ ಬರಲೆಂದು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ.
NDRF, ಮರಾಠಾ ಲಘು ಪದಾತಿ ದಳ, ಅಗ್ನಿಶಾಮಕ ದಳ, ಪೊಲೀಸರು ಸೇರಿದಂತೆ ಒಟ್ಟು 175 ಮಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications