ಶ್ರೀಗಳ ಚಿಕಿತ್ಸೆ ಕುರಿತು ಹೇಳಿಕೆ ಕುರಿತು ಕ್ಷಮೆ ಕೇಳಲು ತಯಾರು: ಡಿಕೆಶಿ
ಬೆಳಗಾವಿ, ಡಿಸೆಂಬರ್ 10: ಶ್ರೀಗಳ ಚಿಕಿತ್ಸೆ ನೀಡುವ ಆಸ್ಪತ್ರೆ ಮತ್ತು ವೈದ್ಯರ ವಿಷಯದಲ್ಲಿ ನಾನು ಸರಿಯಾಗಿಯೇ ಮಾತನಾಡಿದ್ದೇನೆ ಆದರೆ ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಲಾ ಆಸ್ಪತ್ರೆಯನ್ನು ಅಲ್ಪಸಂಖಾತರು ನಡೆಸುತ್ತಿದ್ದಾರೆ ಅದು ಅತ್ಯುತ್ತಮ ಆಸ್ಪತ್ರೆ, ಆರೋಗ್ಯ, ಶಿಕ್ಷಣ ಇವಕ್ಕೆಲ್ಲಾ ಜಾತಿ-ಧರ್ಮಗಳಿಲ್ಲ ಎಂಬ ಭಾವದಿಂದ ಆ ಮಾತುಗಳನ್ನು ಹೇಳಿದ್ದೇನೆ ಆದರೆ ಬಿಜೆಪಿ ಯವರು ಅದನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದರು.
ನಾನು ಸುಳ್ಳು ಹೇಳಿಲ್ಲ, ದುರುದ್ದೇಶಪೂರ್ವಕವಾಗಿಯೂ ಮಾತನಾಡಿಲ್ಲ, ನಾನು ಯಾರಿಗೂ ನೋವು ಮಾಡಲೆಂದು ಹಾಗೆ ಹೇಳಿಲ್ಲ. ಆದರೂ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ಕೂಡಾ ನಾನು ತಯಾರಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬಿಜೆಪಿ ಮುಖಂಡರು ನನ್ನ ಅಭಿವೃದ್ಧಿ ನೋಡಲಾಗದೆ, ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂಬ ಉದ್ದೇಶದಿಂದ ಬೇಕೆಂದೇ ನನ್ನ ವಿರುದ್ಧ ತಂತ್ರಗಳನ್ನು ಹೂಡುತ್ತಿದ್ದಾರೆ. ಆದರೆ ನಾನು ಅದಕ್ಕೆಲ್ಲಾ ಅಂಜುವನಲ್ಲ ಎಂದು ಅವರ ಆತ್ಮವಿಶ್ವಾಸದಿಂದ ನುಡಿದರು.
ನಾನು ಶಿವಕುಮಾರ ಸ್ವಾಮೀಜಿ ಅವರ ದೊಡ್ಡ ಅಭಿಮಾನಿ, ನನ್ನ ಹೆಸರಿನಲ್ಲೇ ಅವರ ಹೆಸರಿದೆ. ನಾನು ಯಾವುದೇ ಕಾರಣಕ್ಕೂ ಅವರ ಬಗ್ಗೆ ಅಗೌರವವಾಗಿ, ಅವರ ವಿಚಾರದಲ್ಲಿ ನಿರ್ಲಕ್ಷ್ಯದಿಂದ ನಡೆದುಕೊಳ್ಳುವುದಾಗಲಿ ಸಾಧ್ಯವಿಲ್ಲ ಎಂದು ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications