ತಮ್ಮನ್ನು ತಾವೇ ಬೈದುಕೊಂಡ ರಮೇಶ್ ಜಾರಕಿಹೊಳಿ
Recommended Video
ಬೆಳಗಾವಿ, ಜನವರಿ 02: 'ನಾನು ರಾಜಕೀಯದಲ್ಲಿರಲು ನಾಲಾಯಕ್' ಎಂದು ಬಿಜೆಪಿ ಶಾಸಕ, ಮಾಜಿ ಅನರ್ಹ ರಮೇಶ್ ಜಾರಕಿಹೊಳಿ ತಮ್ಮನ್ನು ತಾವೇ ಬೈದುಕೊಂಡಿದ್ದಾರೆ.
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರ ಮಹಾರಾಷ್ಟ್ರಕ್ಕೆ ಸೇರಬೇಕು, ಅದು ಮರಾಠಿಗರ ಹಕ್ಕು ಎಂದು ಕೆಲವು ದಿನಗಳ ಹಿಂದಷ್ಟೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದು ವಿವಾದ ಎಬ್ಬಿಸಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, 'ನಾನು ಕನ್ನಡ ವಿರೋಧಿ ಹೇಳಿಕೆ ನೀಡಿಲ್ಲ. ಆ ರೀತಿ ಹೇಳಿಕೆ ನೀಡಿದ್ದರೆ ನಾನು ರಾಜಕೀಯದಲ್ಲಿ ಇರಲು ನಾಲಾಯಕ್' ಎಂದು ಹೇಳಿದ್ದಾರೆ.

ಗೋಕಾಕ್ ನಲ್ಲಿ ನಡೆದ ಕನ್ನಡ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿ ತಮ್ಮ ಹೇಳಿಕೆ ಸ್ಪಷ್ಟನೆ ನೀಡಿರುವ ರಮೇಶ್ ಜಾರಕಿಹೊಳಿ, 'ಮಹಾರಾಷ್ಟ್ರದ ಗಡಿ ಕ್ಯಾತೆ ವಿರುದ್ಧ ನೂರಕ್ಕೆ-ನೂರರಷ್ಟು ನಾನು ಕನ್ನಡಿಗರ ಪರ ಇದ್ದೇನೆ. ಮಹಾರಾಷ್ಟ್ರದಲ್ಲಿ ನಾನು ಮಾಡಿದ ಭಾಷಣ ತಿರುಚಲಾಗಿದೆ' ಎಂದು ಹೇಳಿದ್ದಾರೆ.
'ಕನ್ನಡಪರ ಹೋರಾಟಕ್ಕೆ ನನ್ನ ಬೆಂಬಲ ಸದಾ ಇದೆ. ಕನ್ನಡ ನಾಡು, ನುಡಿ, ಕನ್ನಡಿಗರಿಗೆ ಅಪಮಾನವಾದರೆ ನಾನು ಯಾವುದೇ ತ್ಯಾಗಕ್ಕಾದರೂ ಸಿದ್ದನಿದ್ದೇನೆ, ರಾಜ್ಯಕ್ಕೆ ಕೆಟ್ಟದ್ದು ಮಾಡಿ ರಾಜಕಾರಣ ಮಾಡುವಂತಹ ಅಗತ್ಯ ನನಗಿಲ್ಲ. ಬಿಜೆಪಿ ಪಕ್ಷದ ಮರಾಠ ಮುಖಂಡರಿಗೆ ನೀವೆಲ್ಲಾ ಒಂದಾಗಬೇಕು. ಇಲ್ಲಿ ನಮಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದೇನೆ' ಎಂದು ಹೇಳಿದರು.
ಅದೇ ವೇದಿಕೆಯಲ್ಲಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ರಮೇಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ ಮಾತನಾಡಿ, 'ಕನ್ನಡ ವಿರೋಧಿ ಹೇಳಿಕೆ ನೀಡಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಹೇಳಿದ್ದಾರೆ, ರಮೇಶ್ ಜಾರಕಿಹೊಳಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆಂಬುದು ಮಾಧ್ಯಮಗಳ ಸೃಷ್ಟಿ' ಎಂದಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications