"ರಾಯಣ್ಣ ಪುತ್ಥಳಿ ವಿವಾದ; ಕುರುಬ ನಾಯಕರ ಜತೆ ಚರ್ಚಿಸಿಯೇ ನಿರ್ಧಾರ"
ಬೆಳಗಾವಿ, ಆಗಸ್ಟ್ 27: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕುರುಬ ನಾಯಕರ ಜತೆಗೆ ಚರ್ಚಿಸಿಯೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿವಾದ ಇತ್ಯರ್ಥ ಸಂಬಂಧ ಸಮಾಜ ಮುಖಂಡರ ಸಭೆಗೂ ಮುನ್ನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸರ್ವ ಪಕ್ಷದ ನಾಯಕರ ಜತೆಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕಿದೆ. ಈ ಸಂಬಂಧ ಈಗಾಗಲೇ ಸಿಎಂ, ಗ್ರಹ ಸಚಿವರು ಹಾಗೂ ಕಾಗಿನೆಲೆ ಸ್ವಾಮೀಜಿ ಮಾತನಾಡಿದ್ದಾರೆ. ನಾನೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಎಚ್. ವಿಶ್ವನಾಥ್, ಮಾಜಿ ಸಚಿವ ರೇವಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಜತೆ ಮಾತನಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ತೆಗದುಕೊಳ್ಳುತ್ತೇನೆ. ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ವಿವಾದ ಇತ್ಯರ್ಥ ಪಡಿಸಬೇಕಿದೆ. ಕಾನೂನು ಪಂಡಿತರು ಹಾಗೂ ಜಿಲ್ಲಾಡಳಿತದ ಜತೆ ಚರ್ಚೆ ನಡೆಸಿಯೇ ನಿರ್ಣಯ ಮಾಡುತ್ತೇವೆ ಎಂದರು.
ವಿವಾದಿತ ಸ್ಥಳದಲ್ಲೇ ಮೂರ್ತಿ ಕೂಡಿಸುವುದಾಗಿ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಅದನ್ನು ಮಾಧ್ಯಮಗಳಿಗೆ ಹೇಳಿದ್ದಾರೆಯೇ ಹೊರತು ನನಗೆ ಹೇಳಿಲ್ಲ. ಚರ್ಚೆ ಮಾಡಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಹೇಳಿದ್ದಾರೆ. ಸಮಾಜದ ಪರವಾಗಿ ನಿರ್ಣಯ ಕೈಗೊಳ್ಳುತ್ತೇನೆ" ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ: ಪುತ್ಥಳಿ ಮರು ಸ್ಥಾಪನೆಗೆ ಆಗ್ರಹಿಸಿ ರಾಯಣ್ಣನ ಅಭಿಮಾನಿಗಳು ಬೆಳಗಾವಿಯ ಸುವರ್ಣ ಸೌಧದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪುತ್ಥಳಿ ಮರುಸ್ಥಾಪನೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಮತ್ತೊಂದೆಡೆ ವಿವಾದ ಇತ್ಯರ್ಥ ಸಂಬಂಧ ಹಾಲುಮತ ಸಮಾಜದ ನಾಯಕರ ಜೊತೆಗೆ ಸಚಿವ ಜಾರಕಿಹೊಳಿ ಸಭೆ ನಡೆಸಲಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications