ಜೆಡಿಎಸ್ ಸೇರುವ ಕುರಿತು ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ
Recommended Video

ಬೆಳಗಾವಿ, ಫೆಬ್ರವರಿ 12 : 'ನಾನು ಬಿಜೆಪಿ ತೊರೆಯುವುದಿಲ್ಲ. ಈ ಬಾರಿಯೂ ಬಿಜೆಪಿಯಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದೇನೆ' ಎಂದು ಮಾಜಿ ಸಚಿವ, ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, 'ನಾನು ಜೆಡಿಎಸ್ ಪಕ್ಷವನ್ನು ಸೇರುತ್ತಿಲ್ಲ. ಜೆಡಿಎಸ್ ಸೇರಲಿದ್ದೇನೆ ಎನ್ನುವ ಸುದ್ದಿ ಸುಳ್ಳು' ಎಂದು ಹೇಳಿದರು.
'ಚುನಾವಣೆ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಗಾಳಿ ಸುದ್ದಿಗಳಿಗೆ ಯಾರು ಕಿವಿಗೊಡಬಾರದು. ಈ ಬಾರಿಯೂ ನಾನು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವೆ' ಎಂದರು.

'ಈಗಾಗಲೇ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದೇನೆ. ಒಂದು ಸುತ್ತಿನ ಪ್ರಚಾರ ಕಾರ್ಯ ಮುಕ್ತಾಯವಾಗಿದೆ. ಕಳೆದ ಬಾರಿ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
2013ರ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು 99,283 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಉಟಗಿ ರಾಮಪ್ಪ ಕರೆಪ್ಪ 24,062 ಮತ, ಜೆಡಿಎಸ್ನ ಗುರಪ್ಪ ಕಲ್ಲಪ್ಪ ಹಿಟ್ಟಣಗಿ 3081 ಮತಗಳನ್ನು ಪಡೆದಿದ್ದರು.











Click it and Unblock the Notifications