ಗ್ವಾಲಿಯರ್ನಲ್ಲಿ ಯುದ್ಧ ವಿಮಾನ ಪತನ; ಬೆಳಗಾವಿ ಮೂಲದ ಯೋಧ ಹುತಾತ್ಮ
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ ಹುತಾತ್ಮರಾಗಿದ್ದಾರೆ.
ಬೆಳಗಾವಿ, ಜನವರಿ 29; ಗ್ವಾಲಿಯರ್ ಬಳಿ ನಡೆದ ಯುದ್ಧ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲೆಟ್ ಬೆಳಗಾವಿ ಮೂಲದವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುತಾತ್ಮ ಯೋಧನ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಮೃತಪಟ್ಟವರನ್ನು ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಎಂದು ಗುರುತಿಸಲಾಗಿದೆ. ಶನಿವಾರ ಸುಖೋಯ್ 30 ಎಂಕೆಐ ಹಾಗೂ ಮಿರಾಜ್-200 ಯುದ್ಧ ವಿಮಾನಗಳು ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.
ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ ತಂದೆ, ತಾಯಿ, ಪತ್ನಿ ಮೀಮಾಂಶ, ಮೂರು ವರ್ಷದ ಪುತ್ರಿ, ಒಂದು ವರ್ಷದ ಪುತ್ರನನ್ನು ಅಗಲಿದ್ದಾರೆ. ತಂದೆ ರೇವಣಸಿದ್ಧಪ್ಪ, ತಾಯಿ ಸಾವಿತ್ರಿ ಬೆಳಗಾವಿ ನಗರದಲ್ಲಿಯೇ ವಾಸವಾಗಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, 'ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಯವರು ಗ್ವಾಲಿಯರ್ ನಲ್ಲಿ ತರಬೇತಿ ವೇಳೆಯಲ್ಲಿ ನಡೆದ ಯುದ್ಧ ವಿಮಾನದ ಅಪಘಾತದಲ್ಲಿ ಅಸುನೀಗಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅಗಲಿದ ವೀರಯೋಧನಿಗೆ ನನ್ನ ನಮನಗಳು. ಹುತಾತ್ಮ ಯೋಧನ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಸಂತಾಪ ಸೂಚಿಸಿದರು.
ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಯವರು ಗ್ವಾಲಿಯರ್ ನಲ್ಲಿ ತರಬೇತಿ ವೇಳೆಯಲ್ಲಿ ನಡೆದ ಯುದ್ಧ ವಿಮಾನದ ಅಪಘಾತದಲ್ಲಿ ಅಸುನೀಗಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅಗಲಿದ ವೀರಯೋಧನಿಗೆ ನನ್ನ ನಮನಗಳು. ಹುತಾತ್ಮ ಯೋಧನ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/xLLbAct4Lm
— Basavaraj S Bommai (@BSBommai) January 29, 2023
ಸಹೋದರ ಗ್ರೂಪ್ ಕ್ಯಾಪ್ಟನ್; ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ 1987ರಲ್ಲಿ ಗಣೇಶಪುರದಲ್ಲಿ ಜನಿಸಿದರು. ನಗರದ ಕೇಂದ್ರಿಯ ವಿದ್ಯಾಲಯ-2ರಲ್ಲಿ ಶಿಕ್ಷಣ ಪೂರೈಸಿದ್ದರು. ಪೈಲೆಟ್ ಆದ ಬಳಿಕ ಪತ್ನಿ, ಮಕ್ಕಳ ಜೊತೆ ಗ್ವಾಲಿಯರ್ನಲ್ಲಿ ವಾಸವಾಗಿದ್ದರು.
2009ರಿಂದ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ ರೇವಣಸಿದ್ಧಪ್ಪ ಕೂಡಾ ಸೇನೆಯಲ್ಲಿದ್ದರು. ಕ್ಯಾಪ್ಟನ್ ಆಗಿ ನಿವೃತ್ತಿ ಹೊಂದಿದ್ದಾರೆ. ಸಹೋದರ ಪ್ರವೀಣ್ ಸಹ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ.
ಶನಿವಾರ ಎರಡು ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದಾಗ ಪರಸ್ಪರ ಡಿಕ್ಕಿಯಾಗಿದ್ದವು. ವಿಶೇಷ ವಿಮಾನದಲ್ಲಿ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ ಪಾರ್ಥಿವ ಶರೀರವನ್ನು ಭಾನುವಾರ ಬೆಳಗಾವಿಗೆ ತರಲಾಗುತ್ತದೆ.
ಎರಡು ವಿಮಾನಗಳು ಪತನ; ಭಾರತೀಯ ವಾಯುಪಡೆಯ ಎರಡು ವಿಮಾನಗಳು ಶನಿವಾರ ಗ್ವಾಲಿಯರ್ ಸಮೀಪ ಪತನಗೊಂಡಿದ್ದವು. ಸುಖೋಯ್-30ಎಂಕೆಐ ಹಾಗೂ ಮಿರಾಜ್-2000 ಯುದ್ಧ ವಿಮಾನಗಳು ಗ್ವಾಲಿಯರ್ನಿಂದ ಪ್ರತಿನಿತ್ಯದ ತರಬೇತಿಗಾಗಿ ಟೇಕಾಫ್ ಆಗಿದ್ದವು.

ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ ಮಿರಾಜ್ ಯುದ್ಧ ವಿಮಾನದ ಪೈಲೆಟ್ ಆಗಿದ್ದರು. ಸುಖೋಯ್ ಯುದ್ಧ ವಿಮಾನದಲ್ಲಿದ್ದ ಇಬ್ಬರು ಪೈಲೆಟ್ಗಳು ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾರಾಟದ ವೇಳೆ ಎರಡು ವಿಮಾನಗಳು ಪರಸ್ಪರ ಡಿಕ್ಕಿಯಾಗಿರಬಹುದು ಎಂದು ತಜ್ಞರು ಶಂಕಿಸಿದ್ದಾರೆ. ಆದರೆ ಭಾರತೀಯ ವಾಯುಪಡೆ ಇದನ್ನೂ ಇನ್ನೂ ಖಚಿತಪಡಿಸಿಲ್ಲ. ಅಪಘಾತದ ಕಾರಣ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.
ಮೊರೆನಾ ಜಿಲ್ಲಾಧಿಕಾರಿ ಘಟನೆ ಕುರಿತು ಮಾಹಿತಿ ನೀಡಿದ್ದು ಎರಡು ವಿಮಾನಗಳ ಅವಶೇಷಗಳು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಪಹಾರ್ಗಢ್ ಪ್ರದೇಶ ಮತ್ತು ರಾಜಸ್ಥಾನದ ಭರತ್ಪುರ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಹೇಳಿದ್ದಾರೆ.
ಭಾರತೀಯ ವಾಯುಪಡೆ ಗ್ವಾಲಿಯರ್ನಲ್ಲಿ ತನ್ನ ನೆಲೆ ಹೊಂದಿದೆ. ಸುಖೋಯ್ ಮತ್ತು ಮಿರಾಜ್ ಯುದ್ಧ ವಿಮಾನಗಳ ತಂಡ ಈ ವಾಯುನೆಲೆಯಲ್ಲಿದೆ. ಪ್ರತಿನಿತ್ಯ ಇಲ್ಲಿ ಯುದ್ಧ ವಿಮಾನಗಳು ತರಬೇತಿಗಾಗಿ ಹಾರಾಟ ನಡೆಸುತ್ತಿರುತ್ತವೆ.
ಆಗಸದಲ್ಲಿಯೇ ವಿಮಾನಗಳು ಡಿಕ್ಕಿಯಾಗಿರುವ ಸಾಧ್ಯತೆ ಇದೆ. ಮೊದಲು ಮೊರೆನಾ ಸಮೀಪ ಮಿರಾಜ್ ಯುದ್ಧ ವಿಮಾನ ಪತನಗೊಂಡಿದೆ. ಬಳಿಕ ಭರತ್ಪುರ ಸಮೀಪ ಸುಖೋಯ್ ವಿಮಾನ ಪತನಗೊಂಡಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications