ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರ ಬಿದ್ರೆ ಅದಕ್ಕೆ ಕಾಂಗ್ರೆಸ್ ಹೊಣೆ, ಜೆಡಿಎಸ್ ಅಲ್ಲ: ಬಸವರಾಜ ಹೊರಟ್ಟಿ

|
Google Oneindia Kannada News

Recommended Video

ಸರ್ಕಾರ ಬಿದ್ರೆ ಅದಕ್ಕೆ ಕಾಂಗ್ರೆಸ್ ಹೊಣೆ, ಜೆಡಿಎಸ್ ಅಲ್ಲ: ಬಸವರಾಜ ಹೊರಟ್ಟಿ | Oneindia Kannada

ಬೆಳಗಾವಿ, ಡಿಸೆಂಬರ್ 13: ವಿಧಾನಪರಿಷತ್ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾಗೊಂಡಿರುವ ಬಸವರಾಜ ಹೊರಟ್ಟಿ ಅವರು ಮಿತ್ರ ಪಕ್ಷ ಕಾಂಗ್ರೆಸ್‌ ಮೇಲೆಯೇ ಹರಿಹಾಯ್ದಿದ್ದಾರೆ.

ಈಗಿರುವ ಮೈತ್ರಿ ಸರ್ಕಾರ ಬಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣವೇ ಹೊರತು ಜೆಡಿಎಸ್ ಕಾರಣ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸರ್ಕಾರ ಬೀಳುತ್ತದೆ ಎಂಬ ಸೂಚನೆ ಅವರ ಮಾತಿನಲ್ಲಿ ಇದೆ. ಬಿಜೆಪಿ ಇದನ್ನು ಒತ್ತಿ ಹೇಳುತ್ತಿದೆ.

ಕುಮಾರಸ್ವಾಮಿ ಇರುವುದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಹೊರಟ್ಟಿ ಅಸಮಾಧಾನಕುಮಾರಸ್ವಾಮಿ ಇರುವುದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಹೊರಟ್ಟಿ ಅಸಮಾಧಾನ

ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನದ ಆಕಾಂಕ್ಷಿ ಆಗಿದ್ದರು. ಆದರೆ ಕಾಂಗ್ರೆಸ್ ಪಕ್ಷವು ತಮ್ಮದೇ ಪಕ್ಷದ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿ ಅನ್ನಾಗಿ ಆಯ್ಕೆ ಮಾಡಿತು. ಇದಕ್ಕೆ ಜೆಡಿಎಸ್‌ ನಾಯಕರು ಕೂಡ ತಲೆ ಆಡಿಸಿದರು ಇದು ಬಸವರಾಜ ಹೊರಟ್ಟಿ ಅವರಲ್ಲಿ ಅಸಮಾಧಾನ ಹುಟ್ಟುಹಾಕಿದೆ.

If government collapse the reason will be congress not by JDS: Basavaraj Horatti

ಜೆಡಿಎಸ್‌ ನಾಯಕರ ಮೇಲೂ ಬಸವರಾಜ ಹೊರಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ ಹೇಳುವುದಕ್ಕೆ ತಲೆ ಆಡಿಸುವುದಕ್ಕೆ ಅಲ್ಲ ಕುಮಾರಸ್ವಾಮಿ ಇರುವುದು ಎಂದು ಹೇಳಿದ್ದರು. ಕುಮಾರಸ್ವಾಮಿ ಕೇವಲ ಹೆಬ್ಬೆಟ್ಟು ಸಿಎಂ ಆಗಿದ್ದಾರೆ ಎಂದು ಸಹ ಹೇಳಿದ್ದರು.

ಅಳುತ್ತಾ ಸದನದಿಂದ ಹೊರನಡೆದ ಬಸವರಾಜ ಹೊರಟ್ಟಿ, ಏನು ಕಾರಣ?ಅಳುತ್ತಾ ಸದನದಿಂದ ಹೊರನಡೆದ ಬಸವರಾಜ ಹೊರಟ್ಟಿ, ಏನು ಕಾರಣ?

ಆದರೆ ಕುಮಾರಸ್ವಾಮಿ ಅವರು ಆ ನಂತರ ಬಸವರಾಜ ಹೊರಟ್ಟಿ ಅವರೊಂದಿಗೆ ಮಾತನಾಡಿ ಅವರನ್ನು ಸಮಾಧಾನ ಪಡಿಸಿದರು, ಆ ನಂತರ ಬಸವರಾಜ ಹೊರಟ್ಟಿ ಅವರು ಸಿಎಂ ಅವರ ಬಗ್ಗೆ ಮೃದುವಾಗಿದ್ದರು ಆದರೆ ಕಾಂಗ್ರೆಸ್‌ ವಿರುದ್ಧ ಪೂರ್ತಿ ಗರಂ ಆಗಿದ್ದರು.

English summary
JDS senior leader Basavaraj Horatti said, 'If coalition government collapse the reason would be congress not JDS'. He is upset because legislative council speaker post miss to him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X