ನಾನು ಆರ್.ಎಸ್.ಎಸ್ ನಿಂದ ಬಂದವನು ಅದಕ್ಕೆ ಹೆಮ್ಮೆ ಇದೆ : ಸಿ.ಟಿ.ರವಿ
ಬೆಳಗಾವಿ, ನವೆಂಬರ್ 22 : "ನಾನು ಆರ್.ಎಸ್.ಎಸ್ ಹಿನ್ನೆಲೆಯಿಂದ ಬಂದವನು ಈ ಬಗ್ಗೆ ನನಗೆ ಹೆಮ್ಮೆ ಇದೆ' ಎಂದು ಬಿ.ಜೆ.ಪಿ ಶಾಸಕ ಸಿ.ಟಿ.ರವಿ ಸದನದಲ್ಲಿ ಗುಡುಗಿದರು.
ಸದನದಲ್ಲಿ ಆರ್.ಎಸ್.ಎಸ್ ವಿಷಯ ಚರ್ಚೆ ಬರಲು ಕಾರಣ ಗಣಿ ಭೂವಿಜ್ಞಾನ ಸಚಿವ ವಿನಯ್ ಕುಲಕರ್ಣಿ. ವಿಧಾನಸಭೆ ಪ್ರಶ್ನೋತ್ತರ ಕಲಾಪಕ್ಕೆ ಗಣಿ ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಅವರು ಹಾಜರಾಗದೇ ಇರುವ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಆಗ ವಿನಯ್ ಕುಲಕರ್ಣಿ ಪರವಾಗಿ ಬಸವರಾಜ ರಾಯರೆಡ್ಡಿ ಅವರು ಗಣಿ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾದರು ಇದರಿಂದ ಮತ್ತಷ್ಟು ಕೆರಳಿದ ವಿಪಕ್ಷಗಳು ವಿನಯ್ ಕುಲಕರ್ಣಿ ಅವರದ್ದು ಬೇಜವಾಬ್ದಾರಿ ವರ್ತನೆ ಎಂದು ಕೂಗಾಡಿದರು.
ಜೆಡಿಎಸ್ ಶಾಸಕಾಂಗ ನಾಯಕ ಕುಮಾರ ಸ್ವಾಮಿ ಅವರು "ಇತ್ತೀಚೆಗೆ ಸಚಿವರಿಗೆ ಧರ್ಮ ಪ್ರಚಾರ ಮುಖ್ಯವಾಗಿದೆ ಹಾಗಾಗಿ ಬಂದಿಲ್ಲವೇನೊ' ಎಂದು ವ್ಯಂಗ್ಯದ ಛಾಟಿ ಬೀಸಿದರು. ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೂಡ ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಸಿ.ಟಿ.ರವಿ ಅವರು ಸಚಿವರ ಬೇಜವಬ್ದಾರಿಯನ್ನು ವಚನದ ಮೂಲಕ ಟೀಕಿಸುವ ಭರದಲ್ಲಿ ಬಸವಣ್ಣನ ಅವರ ವಚನವೊಂದನ್ನು ಹೇಳಿದರು.
ಆಗ ರಾಯರೆಡ್ಡಿ ಅವರು ಸಿ.ಟಿ.ರವಿ ಅವರನ್ನುದ್ದೇಶಿಸಿ "ನೀವು ಆರ್.ಎಸ್.ಎಸ್ ನವರು ನಿಮಗೂ ಬಸವಣ್ಣನವರಿಗೂ ಸಂಬಂಧವಿಲ್ಲ ಬಿಡಿ' ಎಂದು ರೇಗಿಸಿದರು.
ಇದರಿಂದ ಕೆರಳಿದ ಸಿ.ಟಿ.ರವಿ "ನಾನು ಆರ್.ಎಸ್.ಎಸ್ ಹಿನ್ನೆಲೆಯಿಂದ ಬಂದವನು ಈ ಬಗ್ಗೆ ನನಗೆ ಹೆಮ್ಮೆ ಇದೆ' ಎಂದು ರಾಯರೆಡ್ಡಿ ಅವರ ಬಾಯಿ ಮುಚ್ಚಿಸಿದರು.
"ಸಚಿವರ ಆರೋಗ್ಯ ಸರಿಯಿಲ್ಲ ಅವರು ವೈದ್ಯರ ಬಳಿ ಹೋಗಿದ್ದಾರೆ ಚಿಕಿತ್ಸೆ ಪಡೆದು ಬರುತ್ತಾರೆ' ಎಂದು ಮುಖ್ಯ ಸಚೇತಕ ಅಶೋಕ ಪಟ್ಟಣ ಸದನಕ್ಕೆ ಮಾಹಿತಿ ನೀಡಿದ ಮೇಲೆ ಗದ್ದಲ ತಣ್ಣಗಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications