ಗಡಿ ಜಿಲ್ಲೆ ಬೆಳಗಾವಿ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ
Recommended Video

ಬೆಳಗಾವಿ, ಆಗಸ್ಟ್.28: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಸಾಬೀತಾಗಿದ್ದು, ಕೈ ಭಿನ್ನಮತ ಭುಗಿಲೆದ್ದಿದೆ.
ಹೌದು, ಇಂದು ಮಂಗಳವಾರ ನಡೆಯಬೇಕಿದ್ದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಈಗ ಮುಂದೂಡಿರುವುದೇ ಲಕ್ಷ್ಮಿ ಹೆಬ್ಬಾಳಕರ ಮತ್ತು ಸತೀಶ ಜಾರಕಿಹೊಳಿ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ.
ಚುನಾವಣೆ ಮುಂದೂಡಲು ಬೆಳಗಾವಿ ತಹಸೀಲ್ದಾರ ಮಂಜುಳಾ ಅವರು ಕಾನೂನು ಸುವ್ಯವಸ್ಥೆ ಕಾರಣವನ್ನು ನೀಡಿದ್ದಾರೆ. ಬೆಳಗಾವಿ ಪಿ.ಎಲ್.ಡಿ ಬ್ಯಾಂಕ್ ನಿಂದ 14 ಸದಸ್ಯರ ಬಲಗಳಲ್ಲಿ 9 ಜನರು ಲಕ್ಷ್ಮಿ ಹೆಬ್ಬಾಳಕರ ಜೊತೆಗೆ ಇದ್ದಾರೆ.

ಆದ್ರೂ ಪರಶುರಾಮ ಪಾಟೀಲ್ ಸೇರಿ ನಾಲ್ವರು ನಿರ್ದೇಶಕರನ್ನ ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ಕಾಕತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಇವೆರೆಡು ವಿಚಾರ ಗೊತ್ತಾಗುತ್ತಿದ್ದಂತೆ ಶಾಸಕಿ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ತಹಸೀಲ್ದಾರ ಕಚೇರಿ ಎದುರು 9 ಜನ ನಿರ್ದೇಶಕರು ಸೇರಿದಂತೆ ನೂರಾರು ಜನ ಬೆಂಬಲಿಗರೊಂದಿಗೆ ಪ್ರತಿಭಟನೆ ಆರಂಭಿಸಿದರು.
ಹೆಬ್ಬಾಳಕರ ಅಹೋರಾತ್ರಿ ಪ್ರತಿಭಟನೆ ಆರಂಭಿಸುತ್ತಿದ್ದಂತೆ ಇತ್ತ ಸತೀಶ ಜಾರಕಿಹೊಳಿ ಬೆಂಬಲಿಗರೂ ಸಹ ಬೆಳಗಾವಿ ತಹಸೀಲ್ದಾರ ಕಚೇರಿಯ ಗೇಟ್ ಹೊರಕ್ಕೆ ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಎರಡು ಬಣದ ಮುಖಂಡರು, ಕಾರ್ಯಕರ್ತರು ಪರಸ್ಪರ ಘೋಷಣೆ ಹಾಕಿದರು.

ಜಾರಕಿಹೊಳಿ ಬೆಂಬಲಿಗರು ಮತ್ತು ಪೊಲೀಸ್ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು. ಜಾರಕಿಹೊಳಿ ಬೆಂಬಲಿಗರು ಹೆಬ್ಬಾಳಕರಗೆ ಧಿಕ್ಕಾರ ಕೂಗಿದ್ರೆ ಇತ್ತ ತಹಸೀಲ್ದಾರ ಮಂಜುಳಾ ಹೇಗೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ನಿಗದಿಯಂತೆ ಇವತ್ತೆ ಚುನಾವಣೆ ನಡೆಸಲು ಹೆಬ್ಬಾಳಕರ ಪಟ್ಟು ಹಿಡಿದರು.
ಆದ್ರೆ ಬೆಳಗಾವಿ ಕಮಿಷನರ್ ಡಾ. ಡಿ.ಸಿ. ರಾಜಪ್ಪ, ಬೆಳಗಾವಿ ಎಡಿಸಿ ಬೂದೇಪ್ಪ ಪ್ರತಿಭಟನಾಕಾರರಿಗೆ ಭರವಸೆ ನೀಡಿ ಪರಿಸ್ಥಿಯನ್ನು ತಿಳಿಗೊಳಿಸಿದರು. ಅಲ್ಲದೆ ಇದೇ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳಕರ, ಇದರಲ್ಲಿ ರಾಜಕೀಯ ವಿರೋಧಿಗಳ ಕಾಣದ ಕೈಗಳ ಕೈವಾಡವಿದೆ. ನನಗೆ ಅನ್ಯಾಯವಾಗಿದೆ.
ನನಗೆ ನ್ಯಾಯ ಸಿಗುವವರೆಗೂ ಹೋರಾಟವನ್ನು ಬಿಡುವುದಿಲ್ಲ. ನಾನೊಬ್ಬಳು ಲಿಂಗಾಯತ ನಾಯಕಿಯಾಗಿ ಬೆಳೆಯಲು ಕೆಲವರು ಬಿಡುತ್ತಿಲ್ಲ. ಇದನೆಲ್ಲವನ್ನೂ ಲಿಂಗಾಯತ ಸಮುದಾಯದವರು ಮತ್ತು ಕ್ಷೇತ್ರದ ಜನರು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications