ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಮತ್ತೆ ಭುಗಿಲೆದ್ದ ಪ್ರತ್ಯೇಕ ರಾಜ್ಯದ ಕೂಗು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಉತ್ತರ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆಂದು ಪ್ರತಿಭಟನೆ | Oneindia Kannada

ಬೆಳಗಾವಿ, ಜುಲೈ.10: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸುವರ್ಣಸೌಧವನ್ನು ಉತ್ತರ ಕರ್ನಾಟಕದ ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು, ಸುವರ್ಣ ಸೌಧದಲ್ಲಿ ಸೆಕ್ರೇಟಿಯಟ್ ಕಚೇರಿ ಆರಂಭಿಸಬೇಕು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಲಾಯಿತು.

ಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳುಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳು

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಪ್ರತ್ಯೇಕ ರಾಜ್ಯದ ಕೂಗು ಎತ್ತಿದರು. ಹೀಗೆ ಮುಂದುವರಿದರೆ ಸಾಂಕೇತಿಕವಾಗಿ ಬೆಳಗಾವಿಯ ಸುವರ್ಣಸೌಧಕ್ಕೆ ಬೆಂಕಿ ಹಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

In Kumaraswamy budget neglected 13 districts of North Karnataka

ಉತ್ತರ ಕರ್ನಾಟಕವನ್ನು ಕುಮಾರಸ್ವಾಮಿ ಅವರು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಮುಂದಿನ ದಿನಗಳಲ್ಲಿ ಬೆಳಗಾವಿ ಸುವರ್ಣಸೌಧ ಮತ್ತು ಬೆಂಗಳೂರು ವಿಧಾನಸೌಧಕ್ಕೆ ಕೀಲಿ ಹಾಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಿಮ್ಮ ಉತ್ತರ ಕರ್ನಾಟಕ ಅಭಿವೃದ್ಧಿ ಸಾಕು.

ನಮಗೆ ಪ್ರತ್ಯೇಕ ರಾಜ್ಯ ಮಾಡಿ ಬಿಡಿ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಕೋಶಾಧ್ಯಕ್ಷ ನಿಲೇಶ ಬನ್ನೂರ ಆಗ್ರಹಿಸಿದರು. ನೂರಾರು ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

English summary
North Karnataka Vikasa Forum and North Karnataka Fighting Committee were protesting infront of Belgaum suvarna soudha. Protesters said In CM Kumaraswamy budget neglected 13 districts of North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X