ಬಜೆಟ್ನಲ್ಲಿ ಉ.ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಚಿವ ಶಿವಶಂಕರ ರೆಡ್ಡಿ
ಬೆಳಗಾವಿ, ಜುಲೈ 07: ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಮೈತ್ರಿ ಸರ್ಕಾರದ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡಿರುವ ಲಾಭ ಕೇವಲ ರಾಮನಗರ, ಹಾಸನ, ಮಂಡ್ಯ ಜಿಲ್ಲೆಗೆ ಮಾತ್ರ ಸಿಗುವುದಿಲ್ಲ ಅದರ ಲಾಭ ಹೆಚ್ಚಾಗಿ ದೊರಕುವುದು ಉತ್ತರ ಕರ್ನಾಟಕದ ರೈತರಿಗೆ ಎಂದು ಅವರು ಹೇಳಿದ್ದಾರೆ.
ಎಚ್.ಕೆ.ಪಾಟೀಲರ ಮಾತನ್ನೇ ದೊಡ್ಡದು ಮಾಡಿ ವಿರೋಧ ಪಕ್ಷಗಳು ಮುಂದಿಡುತ್ತಿವೆ. ಹಾಗೇನಾದರೂ ಉ.ಕರ್ನಟಕಕ್ಕೆ ಅನ್ಯಾಯವಾಗಿದ್ದಲ್ಲಿ ಪೂರಕ ಬಜೆಟ್ನಲ್ಲಿ ಸರಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಬಜೆಟ್ನಲ್ಲಿ ಅನ್ಯಾಯವಾಗಿದೆ ಎಂದು ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಬಿಜೆಪಿ ಈ ಕುರಿತು ಪ್ರತಿಭಟನೆಯನ್ನೂ ಮಾಡಿತ್ತು.
ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಸಹ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸೊಲ್ಲೆತ್ತಿದ್ದರು. ಈ ಬಗ್ಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಪತ್ರ ಬರೆದಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications